ವಿದ್ಯುತ್ ಸ್ಪರ್ಶಿಸಿ ಬೆಸ್ಕಾಂ ಲೈನ್‍ಮ್ಯಾನ್ ಸಾವು- ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ರಾಮನಗರ: ವಿದ್ಯುತ್ ಸ್ಪರ್ಶಿಸಿ ಬೆಸ್ಕಾಂ ಲೈನ್ ಮ್ಯಾನ್ (BESCOM Lineman) ಸಾವನ್ನಪ್ಪಿರುವ ಘಟನೆ ಮಾಗಡಿ ತಾಲೂಕಿನ ಕಳ್ಳಿಪಾಳ್ಯ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಮುದ್ದೆ ಬಿಹಾಳ ಗ್ರಾಮದ ನಿವಾಸಿ ಬೆಸ್ಕಾಂ ಲೈನ್ ಮ್ಯಾನ್ ಶರಣ ಬಸಪ್ಪ (30) ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಕಳ್ಳಿಪಾಳ್ಯ ಗ್ರಾಮದ ವಿದ್ಯುತ್ ಟಿಸಿಯಲ್ಲಿ ಫೀಜ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿದೆ.

ಫೀಜ್ ಅಳವಡಿಸುವ ಮುನ್ನಾ ಎಲ್‍ಸಿ ತೆಗೆಯುವಂತೆ ಕುದೂರು ಬೆಸ್ಕಾಂ ಜೆಇ ನವೀನ್ ಕುಮಾರು ಗಮನಕ್ಕೆ ತಂದರೂ ಜೆಇ ನವೀನ್ ಕುಮಾರ್ ನಿರ್ಲಕ್ಷ್ಯದಿಂದಾಗಿ ಈ ದುರ್ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತಪಟ್ಟ ಒಂದು ಗಂಟೆ ಕಳೆದರೂ ಮೃತದೇಹವನ್ನು ಕೊಂಡೊಯ್ಯಲು ಅಂಬುಲೆನ್ಸ್ ಬಂದಿಲ್ಲ ಎಂದು ಕಿಡಿಕಾರಿದ್ದಾರೆ.

ಈ ಘಟನೆಗೆ ಜೆಇ ನವೀನ್ ಕುಮಾರ್ ನಿರ್ಲಕ್ಷ್ಯವೇ ಕಾರಣ ಎಂದು ಗಂಭೀರ ಆರೋಪ ಕೇಳಿ ಬಂದಿದ್ದು, ಸೂಕ್ತ ಕ್ರಮ ಜರಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದೀರ್ಘಕಾಲದ ಅನಾರೋಗ್ಯ- ಆಸ್ಪತ್ರೆ ಬಿಲ್ ನೋಡಿ ಯುವಕ ಆತ್ಮಹತ್ಯೆ

Comments

Leave a Reply

Your email address will not be published. Required fields are marked *