ಹುತಾತ್ಮ ಯೋಧ ಹರ್ದೀಪ್ ಸಿಂಗ್ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಭಗವಂತ್ ಮಾನ್

ಚಂಡೀಗಢ: ಅರುಣಾಚಲ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಪ್ರಾಣ ಕಳೆದುಕೊಂಡ ಯೋಧ ಸುಬೇದಾರದ ಹರ್ದೀಪ್ ಸಿಂಗ್ ಅವರ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗದ ಜೊತೆಗೆ 1 ಕೋಟಿ ರೂ. ಪರಿಹಾರ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.

Bhagwant Mann

ಅರುಣಾಚಲ ಪ್ರದೇಶದ ಜೆಸಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಹುತಾತ್ಮ ಯೋಧರನ್ನು ಅಗಲಿದ ಕುಟುಂಬಕ್ಕೆ ಸಂತಾಪ ಸೂಚಿಸಿದ ಭಗವಂತ್ ಮಾನ್ ಅವರು, ಹರ್ದೀಪ್ ಸಿಂಗ್ ಅವರು ದೇಶದ ಏಕತೆಯನ್ನು ರಕ್ಷಿಸಲು ಅತ್ಯಂತ ಸಮರ್ಪಣಾಭಾವವನ್ನು ಪ್ರದರ್ಶಿಸಿದ್ದಾರೆ ಮತ್ತು ಅವರ ತ್ಯಾಗ ಇತರ ಸೈನಿಕರಿಗೆ ದೇಶ ಭಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಬದ್ಧತೆಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಲಯಾಳಿ ಯೂಟ್ಯೂಬರ್ ರಿಫಾ ಮೆಹ್ನು ದುಬೈನಲ್ಲಿ ಅನುಮಾನಾಸ್ಪದ ಸಾವು

ಪಂಜಾಬ್‍ನ (ಪಟಿಯಾಲಾ) ಸುಬೇದಾರ್ ಹರ್ದೀಪ್ ಸಿಂಗ್ ಹೋಶಿಯಾರ್‍ಪುರ ಜಿಲ್ಲೆಯ ಗರ್‍ಡಿವಾಲಾ ತೆಹಸಿಲ್‍ನ ಬರಂಡಾ ಗ್ರಾಮದವರಾಗಿದ್ದು, ಪತ್ನಿ ರವೀಂದರ್ ಕೌರ್, ಓರ್ವ ಪುತ್ರಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲಿ ಗೂಂಡಾಗಳಿಂದ 15 ಬಾರಿ ಫೈರಿಂಗ್ – ಇಬ್ಬರಿಗೆ ಗಾಯ

Comments

Leave a Reply

Your email address will not be published. Required fields are marked *