ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸೋ ಮುನ್ನವೇ ವ್ಯಕ್ತಿ ಸಾವು

ಬೀದರ್: ಪಿಎಲ್‍ಡಿ ಬ್ಯಾಂಕ್ ಹಾಗೂ ಪಿಕೆಪಿಎಸ್‍ನ ನಿರ್ದೇಶಕರಾಗಿ ಆಯ್ಕೆಯಾಗಿದ್ದ ವ್ಯಕ್ತಿಯೊಬ್ಬರು, ಅಧಿಕಾರ ಸ್ವೀಕರಿಸುವ ಮುನವೇ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಇಸ್ಲಾಂಪೂರ ಗ್ರಾಮದಲ್ಲಿ ನಡೆದಿದೆ.

ಇಸ್ಲಾಂಪೂರ ಗ್ರಾಮದ ಕಾಶಿನಾಥ ಕನಾಟೆ(66) ಮೃತ ವ್ಯಕ್ತಿ. ಇವರು ಗ್ರಾಮದ ಸಮೀಪ ಇರುವ ಮಶಾಳ ತಾಂಡಾದಿಂದ ಭಾನುವಾರ ರಾತ್ರಿ ಗ್ರಾಮಕ್ಕೆ ಬರುವಾಗ ಬೈಕಿನಿಂದ ಬಿದ್ದು ಮೃತಪಟ್ಟಿದ್ದಾರೆ. ಕಳೆದ 30 ವರ್ಷಗಳಿಂದ ಸಹಕಾರಿ ರಂಗದ ವಿವಿಧ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಇವರು, ಬಸವಕಲ್ಯಾಣದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರಾಗಿ ಹಾಗೂ ರಾಜೇಶ್ವರ ಪಿಕೆಪಿಎಸ್‍ನ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.

ಕಳೆದ ಒಂದು ವಾರದ ಹಿಂದೆ ನಡೆದ ರಾಜೇಶ್ವರ ಪಿಕೆಪಿಎಸ್ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಇವರು, ಎರಡು ದಿನಗಳ ಹಿಂದೆ ನಡೆದಿದ್ದ ಪಿಎಲ್‍ಡಿ ಬ್ಯಾಂಕ್ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಕಾಶಿನಾಥ ಅವರು ಪಿಕೆಪಿಎಸ್ ಹಾಗೂ ಪಿಎಲ್‍ಡಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಯಾಗಿದ್ದನ್ನು ಸಹಿಸದ ವ್ಯಕ್ತಿಗಳು ಕೊಲೆ ಮಾಡರಬಹುದು ಎಂದು ಶಂಕೆ ವ್ಯಕ್ತಪಡಿಸಿದರು.

ಮಂಠಾಳ ಸಿಪಿಐ ಮಹೇಶಗೌಡ ಪಾಟೀಲ, ಮುಡಬಿ ಪಿಎಸ್‍ಐ ವಸೀಮ್ ಪಟೇಲ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *