ಸಿಇಓ ಎದುರಲ್ಲೇ ಗ್ರಾ.ಪಂ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಜಿ.ಪಂ ಸದಸ್ಯ!

ಬೀದರ್: ಜಿಲ್ಲಾ ಪಂಚಾಯತಿ ಸದಸ್ಯರೊಬ್ಬರು ಸಿಇಓ ಎದುರಲ್ಲೇ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಬಸವಕಲ್ಯಾಣ ತಾಲೂಕಿನ ಹುಲಸೂರ ಜಿಪಂ ಸದಸ್ಯ ಸುಧೀರ್ ಕಾಡಾದಿ ರೋಷಾವೇಶದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಚಂದ್ರಕಾಂತ ದೆಟನೆ ಎಂಬವರ ಮುಖಕ್ಕೆ ಚಪ್ಪಲಿಯಿಂದ ಹೊಡೆಯಲು ಯತ್ನಿಸಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ.

ಶನಿವಾರ ಪಂಚಾಯತಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಸಿಇಓ ಡಾ. ಆರ್ ಸೇಲ್ವಮಣಿ ಎದುರಲ್ಲೇ ಈ ಘಟನೆ ನಡೆದಿದ್ದು, ಸಿಇಓ ಸಾಹೇಬ್ರು ಜನ ಪ್ರತಿನಿಧಿಗಳ ರಂಪಾಟ ನೋಡಿ ದಂಗಾಗಿ ಹೊಗಿದ್ದರು.

ಕುಡಿಯುವ ನೀರಿನ ಯೋಜನೆಯಡಿಯಲ್ಲಿ 32 ಲಕ್ಷದ ಕಾಮಗಾರಿ ಪೂರ್ಣಗೊಂಡಿದ್ದು ಅದರ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಗ್ರಾಪಂ ಅಧ್ಯಕ್ಷರು ಮನವಿ ಮಾಡಿದ್ದರು. ಆದ್ರೆ ಇದಕ್ಕೆ ವಿರೋಧಿಸಿದ ಜಿ.ಪಂ ಸದಸ್ಯ ಸುಧೀರ್ ಕಾಡಾದಿ ಮತ್ತು ಅವರ ಟೀಂ ಅಶ್ಲೀಲವಾಗಿ ಮಾತನಾಡುತ್ತಾ ಗ್ರಾಪಂ ಅಧ್ಯಕ್ಷರ ಮತ್ತು ಮುಖಂಡರ ಮೇಲೆ ಹಲ್ಲೆಗೆ ಮುಂದಾದರು ಎನ್ನಲಾಗಿದೆ.

ಈ ಕುರಿತು ಹುಲಸೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://youtu.be/jPubjLqjr0A

Comments

Leave a Reply

Your email address will not be published. Required fields are marked *