ಮಂಡ್ಯದಲ್ಲಿ ಸೃಷ್ಟಿಯಾಯ್ತು ಒಂದೇ ಬಾರಿ ಐನೂರು ಜನ ನಿಲ್ಲಬಹುದಾದ ತೇಲುವ ವೇದಿಕೆ!

ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಕೆರೆ ತೊಣ್ಣೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ತೊಣ್ಣೂರು ಕೆರೆ ಉತ್ಸವ ನಡೆಯಲಿದ್ದು, ಉತ್ಸವಕ್ಕಾಗಿ ಕೆರೆಯ ನಡುವೆ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ.

ಇಂದು ಸಂಜೆ ಏಳು ಗಂಟೆ ಸುಮಾರಿಗೆ ತೊಣ್ಣೂರು ಕೆರೆ ಉತ್ಸವವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟನೆ ಮಾಡಲಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿಎಸ್.ಪುಟ್ಟರಾಜು ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಕೆರೆಯ ಸುತ್ತಮುತ್ತ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

ಕೆರೆಯ ಸಮೀಪವೇ ಇರುವ ಬೆಟ್ಟಗುಡ್ಡಗಳೂ ಕೂಡ ವಿದ್ಯುತ್ ದೀಪಾಲಂಕಾರದಿಂದ ಕಣ್ಮನ ಸೆಳೆಯುತ್ತಿವೆ. ಕೆರೆಯ ನಡುವೆ ಹಾಕಿರುವ ವೇದಿಕೆಯಲ್ಲಿ ಏಕಕಾಲಕ್ಕೆ ಐನೂರು ಜನ ಕುಳಿತುಕೊಳ್ಳಬಹುದಾಗಿದೆ. ಮೊದಲು ಕೆರೆಗೆ ಗಂಗಾಪೂಜೆ ಸಲ್ಲಿಸಲಾಗುತ್ತದೆ.

ಮೂರು ದಿನಗಳ ಕಾಲ ಕನ್ನಡದ ಪ್ರಖ್ಯಾತ ಗಾಯಕರು, ಸಿನೆಮಾ ನಟ, ನಟಿಯರು, ಜಾನಪದ ಕಲಾವಿದರು ಕೆರೆಯ ನಡುವೆ ನಿರ್ಮಿಸಿರುವ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುವುದರ ಮೂಲಕ, ಕಲಾ ರಸಿಕರ ಮನ ತಣಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಉತ್ಸವಕ್ಕಾಗಿ ಪ್ರವಾಸಿ ತಾಣ ತೊಣ್ಣೂರು ಕೆರೆ ಸರ್ವ ಅಲಂಕೃತವಾಗಿದ್ದು, ಹೊಸ ಲೋಕವೇ ಧರೆಗಿಳಿದಂತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *