ಬೆಂಗಳೂರು: ಇಡೀ ಶಾಲಾ ಮಕ್ಕಳು 71ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ತಲ್ಲಿನರಾಗಿದ್ದರು. ಇದೇ ವೇಳೆ ಮರದ ಕೆಳಗೆ ಆಟವಾಡುತ್ತಿದ್ದಾಗ ಇದ್ದಕ್ಕಿದಂತೆ ಮರ ಬೀಳುವ ಶಬ್ದ ಕೇಳಿಸಿದೆ. ಕೂಡಲೇ ವಿದ್ಯಾರ್ಥಿಗಳು ಓಡಿದ್ದರೂ, ನಾಲ್ವರು ಮಕ್ಕಳು ಮರದಡಿ ಸಿಲುಕಿದ ದಾರುಣ ಘಟನೆ ನಡೆದಿದೆ.
ಬೆಂಗಳೂರು ಹೊರವಲಯ ಹೊಸೂರು ಮುಖ್ಯರಸ್ತೆಯ ಬೇರೆಟೇನ ಅಗ್ರಹಾರದ ಸರ್ಕಾರಿ ಶಾಲಾ ಆವರಣದಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಿಂದ ಈ ವೇಳೆ ಲಕ್ಷ್ಮೀಕಾಂತ್ ಮತ್ತು ರಾಕೇಶ್ ಎಂಬ ಇಬ್ಬರು ವಿದ್ಯಾರ್ಥಿಗಳ ಕಾಲು ಮುರಿದಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಮಾರಕ ಶಾಲೆಯಲ್ಲಿ ಇಂದು ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸಿದ್ಧತೆ ನಡೆಸುತ್ತಿದ್ದ ವೇಳೆ ಶಾಲಾ ಆವರಣದಲ್ಲಿನ ಮರ ಉರುಳಿ ವಿದ್ಯಾರ್ಥಿಗಳ ಮೇಲೆ ಬಿದ್ದಿದೆ. ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳು ಸಹೋದರರಾಗಿದ್ದಾರೆ. ವಿಷಯ ತಿಳಿದು ಶಾಸಕ ಎಂ. ಕೃಷ್ಣಪ್ಪ, ಸ್ಥಳೀಯ ಪಾಲಿಕೆ ಸದಸ್ಯ ಶಾಂತಬಾಬು ಮತ್ತು ಮಾಜಿ ಪಾಲಿಕೆ ಸದಸ್ಯೆ ಶ್ರೀನಿವಾಸರೆಡ್ಡಿ, ಬೆಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧೀಕಾರಿ ರಮೇಶ್ ಆಸ್ಪತ್ರೆಗೆ ಭೇಟಿ ನೀಡಿ ಶಸ್ತ್ರ ಚಿಕಿತ್ಸೆಗೆ ಬೇಕಾದ ನೆರವು ನೀಡುವ ಭರವಸೆ ನೀಡಿದ್ದಾರೆ. ಈ ನಡುವೆ ಸ್ಥಳೀಯ ಜನಪ್ರತಿನಿಧಿಗಳು ಸಹೋದರರ ನೆರೆವಿಗೆ ಆಗಮಿಸಿದ್ದಾರೆ.










Leave a Reply