ಹಾಸನ ಮಹಿಳೆಯ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಹಾಸನ: ಇತ್ತೀಚೆಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವೊಂದು ಇದೀಗ ಟ್ವಿಸ್ಟ್ ಪಡೆದುಕೊಂಡಿದ್ದು, ಪತಿಯೇ ಕೊಲೆಮಾಡಿರುವ ವಿಚಾರ ಹೊರಬಿದ್ದಿದೆ.

ಜಿಲ್ಲೆಯ ಚನ್ನರಾಯಪಟ್ಟಣ ಗುಂಡಶೆಟ್ಟಿಹಳ್ಳಿ ಗ್ರಾಮದಲ್ಲಿ ಕಳೆದ 12ರಂದು ನೇಣು ಬಿಗಿದ ಪರಿಸ್ಥಿತಿಯಲ್ಲಿ ಸುಷ್ಮಾ ಅವರ ಶವ ಪತ್ತೆಯಾಗಿತ್ತು.

ತನಿಖೆಯಲ್ಲಿ ಸುಷ್ಮಾರಿಗೆ ಇನ್ನೊಬ್ಬ ವ್ಯಕ್ತಿಯ ಜೊತೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಇದ್ರಿಂದ ಸುಷ್ಮಾ ಪತಿ ಮತ್ತು ಆತನ ಸಹೋದರ ಮಹೇಶ ಇಬ್ಬರೂ ಸೇರಿ ಸುಷ್ಮಾ ಕೊಲೆ ಮಾಡಿ ನಂತರ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದರು.

ಇದೀಗ ಕೊಲೆ ಮಾಡಿರುವ ತಪ್ಪು ಒಪ್ಪಿಕೊಂಡಿದ್ದು ಇಬ್ಬರನ್ನ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ಸದ್ಯ ಮೂರನೇ ವ್ಯಕ್ತಿ ನರೇಶ್ ಮುಂಬೈ ಮೂಲದವನಾಗಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.

Comments

Leave a Reply

Your email address will not be published. Required fields are marked *