ಕಾಂಗ್ರೆಸ್ ನಿಂದ ಯೋಗೇಶ್ ಗೌಡ ಪತ್ನಿಯ ಹೈಜಾಕ್ ಪ್ರಕರಣಕ್ಕೆ ಹೊಸ ಟ್ವಿಸ್ಟ್!

ಹುಬ್ಬಳ್ಳಿ: ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ನನ್ನ ಬಗ್ಗೆ ಕೇಳಿಬರುತ್ತಿರುವ ಎಲ್ಲಾ ಮಾಹಿತಿಗಳು ಸುಳ್ಳು. ನನ್ನನ್ನು ಕಾಂಗ್ರೆಸ್ ಪಕ್ಷದ ಯಾರು ಸಂಪರ್ಕಿಸಿಲ್ಲ ಅಂತ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಹೇಳಿಕೆ ನೀಡುವ ಮೂಲಕ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ಗಂಡನ ಹತ್ಯೆಯಲ್ಲಿ ಸಚಿವ ವಿನಯ್ ಕುಲಕರ್ಣಿ ಪಾತ್ರ ಇದೆ ಅಂತ ನಾನು ಸುಮ್ಮನೆ ಆರೋಪ ಮಾಡಲ್ಲ. ಗಂಡನನ್ನು ಕೊಂದವರಿಗೆ ಶಿಕ್ಷೆ ಆಗಬೇಕು. ನನಗೂ, ನನ್ನ ನಾಲ್ಕು ಮಕ್ಕಳಿಗೂ ನ್ಯಾಯ ಸಿಗಬೇಕು ಅಷ್ಟೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನಿಂದ ಯೋಗೇಶ್‍ಗೌಡ ಪತ್ನಿ ಹೈಜಾಕ್?- ರಾತ್ರೋರಾತ್ರಿ ಕರೆದೊಯ್ದು ಪಕ್ಷ ಸೇರುವಂತೆ ಬೆದರಿಕೆ ಆರೋಪ

ಸಿಎಂ ಸಿದ್ದರಾಮಯ್ಯ ನಮ್ಮ ಜಾತಿಯವರು. ಅವರ ಬಳಿ ಹೋದರೆ ನನಗೆ ನ್ಯಾಯ ಸಿಗುತ್ತೆ. ಅವರು ಸೇರಿಸಿಕೊಂಡ್ರೆ ನಾನು ಕಾಂಗ್ರೆಸ್ ಸೇರುತ್ತೇನೆ. ಸಚಿವ ವಿನಯ್ ಕುಲಕರ್ಣಿ ಇದುವರೆಗೆ ನನ್ನೊಂದಿಗೆ ಯಾವತ್ತೂ ಮಾತಾಡಿಲ್ಲ. ನನ್ನ ಭಾವ ಗುರುನಾಥ್ ಗೌಡ ಪ್ರತಿಯೊಂದಕ್ಕೂ ನನಗೆ ಅಡ್ಡಿಪಡಿಸುತ್ತಿದ್ದಾರೆ. ನಾನು ಯಾರನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಗಂಡನ ಸಾವನ್ನು ನನ್ನ ಭಾವ ಹಾಗೂ ಸ್ಥಳೀಯ ನಾಯಕರು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಅಂತ ಮಲ್ಲಮ್ಮ ತನ್ನ ಅಳಲು ತೋಡಿಕೊಂಡಿದ್ದಾರೆ.

ಗುರುವಾರ ರಾತ್ರೋ ರಾತ್ರಿ ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ಕಾಂಗ್ರೆಸ್ ನಾಯಕರು ಕರೆದೊಯ್ದಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶಗೌಡ ಹಾಗೂ ನಾಗರಾಜ ಗೌರಿಯ ಮೂಲಕ ಕಾಂಗ್ರೆಸ್ ಗೆ ಸೇರ್ಪಡೆಯಾಗುವಂತೆ ಒತ್ತಾಯಿಸಿದ್ದು, ಜೀವ ಬೆದರಿಕೆ ಒಡ್ಡಿ ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಳ್ಳುವ ಯತ್ನ ನಡೆದಿದೆ ಎಂದು ಯೋಗೇಶ್‍ಗೌಡ ಸಹೋದರ ಗುರುನಾಥ ಗೌಡ ಆರೋಪಿಸಿದ್ದರು.

https://www.youtube.com/watch?v=BYTYCPOHHdE

Comments

Leave a Reply

Your email address will not be published. Required fields are marked *