ಬಿಎಸ್‍ವೈ ಆಪ್ತನ ಮೇಲಿನ ಐಟಿ ದಾಳಿಗೆ ಬಿಗ್ ಟ್ವಿಸ್ಟ್ – 750 ಕೋಟಿಯಲ್ಲಿ 600 ಕೋಟಿ ಬೇನಾಮಿ

– ಕ್ಲಾಸ್ 1 ಕಾಂಟ್ರಾಕ್ಟರ್ ಗಳಿಗೆ ಮತ್ತೆ ಡ್ರಿಲ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಸೇರಿದಂತೆ ನೀರಾವರಿ, ಪಿಡಬ್ಲ್ಯೂಡಿ ಇಲಾಖೆಯ ಕ್ಲಾಸ್ 1 ಕಂಟ್ರಾಕ್ಟರ್ ಗಳಾದ ಉಪ್ಪಾರ, ಅರವಿಂದ್, ಸೋಮಶೇಖರ್ ಮೇಲೆ ಈ ತಿಂಗಳ ಆರಂಭದಲ್ಲಿ ಐಟಿ ನಡೆಸಿದ್ದ ರೇಡ್‍ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಐಟಿ ರೇಡ್ ವೇಳೆ ಸಿಕ್ಕಿದ್ದ 750 ಕೋಟಿ ರೂಪಾಯಿ ಮೌಲ್ಯದ ಸಂಪತ್ತಿನಲ್ಲಿ 150 ಕೋಟಿಯಷ್ಟೇ ಸಕ್ರಮ. ಉಳಿದ 600 ಕೋಟಿ ಬೇನಾಮಿ ಅನ್ನೋದು ಖಚಿತವಾಗಿದೆ. ದಾಳಿ ವೇಳೆ ಪತ್ತೆಯಾಗಿದ್ದ 750 ಕೋಟಿ ಅಕ್ರಮ ಆಸ್ತಿ ಕುರಿತು ತನಿಖೆಯ ವೇಳೆ 30ಕ್ಕೂ ಹೆಚ್ಚು ಗುತ್ತಿಗೆದಾರರನ್ನು ಕರೆಸಿ ಐಟಿ ಇಲಾಖೆ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಅಲ್ಪಸಂಖ್ಯಾತರ ಓಲೈಕೆಗಾಗಿ ಕೈ, ದಳ ನಾಯಕರು RSS ಕುರಿತು ಟೀಕೆ ಮಾಡ್ತಿದ್ದಾರೆ: ಬಿ.ವೈ.ವಿಜಯೇಂದ್ರ

ವಿಚಾರಣೆ ವೇಳೆ 600 ಕೋಟಿಗೆ ಲೆಕ್ಕ ತೋರಿಸುವಲ್ಲಿ ಗುತ್ತಿಗೆದಾರರು ವಿಫಲರಾಗಿದ್ದಾರೆ. ಕೇವಲ 150 ಕೋಟಿಗೆ ದಾಖಲೆ ಒದಗಿಸುವಲ್ಲಿ ಗುತ್ತಿಗೆದಾರರು ಸಫಲರಾಗಿದ್ದಾರೆ. ಶೀಘ್ರವೇ ಆಸ್ತಿ ಅಸೆಸ್ಮೆಂಟ್ ಟೀಂಗೆ ತನಿಖಾ ತಂಡದ ವರದಿ ಸಲ್ಲಿಕೆ ಮಾಡಿದ್ದು, ಮತ್ತೊಮ್ಮೆ ಗುತ್ತಿಗೆದಾರರನ್ನು ವಿಚಾರಣೆಗೆ ಒಳಪಡಿಸಲಿದೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಈ 600 ಕೋಟಿ ಅಕ್ರಮ ಸಂಪತ್ತು ಯಾರದು ಅಂತ ತನಿಖೆ ಚುರುಕುಗೊಳಿಸಲು ಮುಂದಾಗಿದೆ. ಈ ಮಧ್ಯೆ ಯಡಿಯೂರಪ್ಪ ಮಾತ್ರ ಉಮೇಶ್ ಮೇಲಿನ ಐಟಿ ರೇಡ್‍ಗೂ ನನಗೂ ಸಂಬಂಧ ಇಲ್ಲ ಅಂದಿದ್ದಾರೆ. ಇದನ್ನೂ ಓದಿ: ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ

Comments

Leave a Reply

Your email address will not be published. Required fields are marked *