ಹುಬ್ಬಳ್ಳಿ: ಬಿಗ್ ಬಾಸ್ ಸ್ಪರ್ಧಿ ಸಮೀರ್ ಆಚಾರ್ಯ ಮಹದಾಯಿ, ಕಳಸಾ ಬಂಡೂರಿ ಯೋಜನೆ ಕುರಿತು ಚರ್ಚೆ ಮಾಡಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಮೀರ್ ಆಚಾರ್ಯ, ಬಿಗ್ ಬಾಸ್ ಸ್ಪರ್ಧೆಯಲ್ಲಿ ಸಪೋರ್ಟ್ ಮಾಡಿದ ಕರ್ನಾಟಕದ ಪ್ರತಿಯೊಬ್ಬ ನಾಗರಿಕರಿಗೂ ಧನ್ಯವಾದಗಳು. ಮಹದಾಯಿ, ಕಳಸಾ ಬಂಡೂರಿ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಯೋಜನೆ ಬಗ್ಗೆ ಚರ್ಚೆ ಮಾಡೋದಕ್ಕೆ ಸಮಯಾವಕಾಶ ಕೇಳಿದ್ದೇನೆ. ಅವಕಾಶ ಕೊಟ್ಟರೆ ಭೇಟಿ ಮಾಡುವುದಾಗಿ ತಿಳಿಸಿದ್ರು.
ಫೆಬ್ರವರಿ 4ರಂದು ಬೆಂಗಳೂರು ಬಂದ್ ಗೆ ಕರೆ ನೀಡಿರೋದಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ನೀರು ಪಡೆಯುವವರೆಗೂ ಈ ಹೋರಾಟಕ್ಕೆ ನಾನು ಸಾಥ್ ನೀಡುತ್ತೇನೆ ಎಂದು ಹೇಳಿದ್ರು.





Leave a Reply