ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲ್ಲೂಕಿನ ಹೊನಗನಹಳ್ಳಿ ರೈಲ್ವೆ ಗೇಟ್ ಬಳಿ ಘಟನೆ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ವಿಜಯಪು ರದಿಂದ ಬಾಗಲಕೋಟೆ ಮಾರ್ಗವಾಗಿ ಹೊರಟಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ?: ಕ್ಷಮೆ ಕೇಳಿದ ಹಂಸಲೇಖ

ಮೃತಪಟ್ಟಿರುವ ವ್ಯಕ್ತಿಯ ಹೆಸರು ಹಾಗೂ ಮಾಹಿತಿ ತಿಳಿದು ಬಂದಿಲ್ಲ. ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ:   ಮುರುಡೇಶ್ವರದ ಶಿವನ ಬೃಹತ್ ಪ್ರತಿಮೆಯ ಮೇಲೆ ಐಸಿಸ್ ಉಗ್ರರ ಕಣ್ಣು?

Comments

Leave a Reply

Your email address will not be published. Required fields are marked *