ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ ಸವಾರ- ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ (Bike) ಸವಾರನ ತಲೆ  ಬಸ್ (Bus) ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

ದೇವನಹಳ್ಳಿ ತಾಲೂಕಿನ ಅತ್ತಿಬೆಲೆ ಗ್ರಾಮದ ಮುರುಳಿ(35) ಮೃತ ವ್ಯಕ್ತಿ. ಮುರುಳಿ ದೇವನಹಳ್ಳಿ ಕಡೆಯಿಂದ ಚಿಕ್ಕಬಳ್ಳಾಪುರದ (Chikkaballapur) ಕಡೆಗೆ ಆಕ್ಟೀವಾ ಹೊಂಡಾ ಮೂಲಕ ಬರುತ್ತಿದ್ದ. ಆದರೆ ಗಿರಿಯಾಸ್ ಶೋ ರೂಂ ಮುಂಭಾಗದಲ್ಲಿ ಏಕಾಏಕಿ ಬ್ರೇಕ್ ಹಾಕಿದ್ದು, ಗಾಡಿ ಸ್ಕಿಡ್ ಆಗಿ ಮುರುಳಿ ರಸ್ತೆಗೆ ಬಿದ್ದು ತರಚಿಕೊಂಡು ಹೋಗಿದೆ.

ಈ ವೇಳೆ ಚಿಕ್ಕಬಳ್ಳಾಪುರದಿಂದ ದೊಡ್ಡಬಳ್ಳಾಪುರ ಮಾರ್ಗದ ಕಡೆಗೆ ಹೋಗುತ್ತಿದ್ದ ಕೆಎಸ್‍ಆರ್‌ಟಿಸಿ ಬಸ್‍ನ ಹಿಂಬದಿ ಚಕ್ರಕ್ಕೆ ಮರುಳಿ ತಲೆ ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆದರೆ ಬಸ್‍ನ ಚಕ್ರ ಮುರುಳಿಗೆ ಟಚ್ ಆಗಿರುವುದು ಚಾಲಕನಿಗೂ ಗೊತ್ತಾಗದೇ ಆತ ತನ್ನ ಪಾಡಾಗಿ ಹೊರಟು ಹೋಗಿದ್ದಾನೆ. ಆದರೆ ಸ್ಥಳೀಯರು ಕೆಎಸ್‍ಆರ್‌ಟಿಸಿ ಬಸ್‍ನ್ನು ಅಡ್ಡ ಹಾಕಿ ತಡೆಯೊಡ್ಡಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಅವರೇ ವಯಸ್ಸು‌ ಆಗೋಯ್ತಲ್ಲ ನಮ್ಗೆ: ಎದುರಿಗೆ ಸಿಕ್ಕ ಸಿದ್ದರಾಮಯ್ಯರಿಂದ ಜೋಕ್

ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಬಸ್ ಹಾಗೂ ಅಪಘಾತಕ್ಕೊಳಗಾದ ಬೈಕ್‍ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಕೈಯಲ್ಲಿ ಮಚ್ಚು ಹಿಡಿದು ಫುಟ್‍ಬೋರ್ಡ್ ಮೇಲೆ ವಿದ್ಯಾರ್ಥಿ ಪುಂಡಾಟ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *