ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಬಳ್ಳಾರಿ: 2 ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕೊಟ್ಟೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಸಾಸಲವಾಡದ ಶಶಿಧರ್(30) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ಇನ್ನೂ ಕೊಟ್ಟೂರು ತಾಲೂಕಿನ ಲೊಟ್ಟನಕೆರೆ ನಿವಾಸಿಗಳಾದ ನಾಗರಾಜ್ (22) ಎಂಬವರ ಕಾಲು ಮುರಿದಿದ್ದು, ಹಿಂಬದಿ ಸವಾರ ಮೂಗಣ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆ ಮಧ್ಯದಲ್ಲಿಯೇ ಬಿದ್ದಿದ್ದ ಅವರನ್ನು ಸ್ಥಳೀಯ ನಿವಾಸಿಗಳು 108 ಅಂಬುಲೆನ್ಸ್ ಗೆ ಕರೆ ಮಾಡಿ ದಾವಣಗೆರೆ ಆಸ್ಪತ್ರೆಗೆ ಸಾಗಿಸಿದ್ದಾರೆ.

ಪಟ್ಟಣದ ಹೊರವಲಯ ಮುರುಳ ಸಿದ್ಧೇಶ್ವರ ಕಲ್ಯಾಣ ಮಂಟಪದ ಸಮೀಪದಲ್ಲಿ ಅಪಘಾತ ನಡೆದಿದ್ದು, ಬೈಕ್ ಛಿದ್ರ ಛಿದ್ರವಾಗಿದ್ದು, ಬಿಡಿ ಭಾಗಗಳು ರಸ್ತೆ ತುಂಬ ಬಿದ್ದಿವೆ. ಈ ಕುರಿತು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *