ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ: ಪರಿಕ್ಕರ್

ಪಣಜಿ: ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಗೋವಾದ ಮಾಜಿ ಸಿಎಂ, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ಗೋವಾದಲ್ಲಿ ಆಡಳಿತರೂಢ ಬಿಜೆಪಿಗೆ ಸೋಲಾದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಯಾರಿಗೂ ಸ್ಪಷ್ಟವಾದ ಬಹುಮತ ನೀಡಿಲ್ಲ. ಹೀಗಾಗಿ ಏನಾಗುತ್ತದೆ ಎನ್ನುವುದನ್ನು ಮುಂದೆ ನೋಡೋಣ ಎಂದು ಹೇಳಿದರು.

ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಮಾತನಾಡಿ, ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಾವು ಗೆದ್ದಿದ್ದೇವೆ. ಆದರೆ ಗೋವಾದಲ್ಲಿ ಯಾರಿಗೂ ಬಹುಮತ ಸಿಕ್ಕಿಲ್ಲ. ಸೋತಿದ್ದು ಯಾಕೆ ಎನ್ನುವುದನ್ನು ನಾವು ಅಧ್ಯಯನ ಮಾಡುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಇಂದೇ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು.

ವಿಧಾನಸಭಾ ಚುನಾವಣೆಯ ಬಳಿಕ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರಪ್ರದೇಶ, ಉತ್ತರಾಖಂಡ್, ಮಣಿಪುರ, ಮತ್ತು ಗೋವಾದಲ್ಲಿ ನಾವು ಸರ್ಕಾರ ರಚಿಸುತ್ತೇವೆ ಎಂದು ಹೇಳಿದ್ದಾರೆ.

ಗೋವಾದಲ್ಲಿ ಒಟ್ಟು 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ 17, ಬಿಜೆಪಿ 13, ಇತರರು 10 ಸ್ಥಾನದಲ್ಲಿ ಗೆಲುವು ಕಂಡಿದ್ದಾರೆ. 2012ರ ಚುನಾವಣೆಯಲ್ಲಿ ಬಿಜೆಪಿ 21, ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದುಕೊಂಡಿತ್ತು.

Comments

Leave a Reply

Your email address will not be published. Required fields are marked *