ಪ್ರತಾಪ್ ಸಿಂಹ ವಿಜಯೋತ್ಸವ – ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಕಾರ್ಯಕರ್ತರ ಸ್ಟೆಪ್

ಮಡಿಕೇರಿ: ನೂತನ ಸಂಸದ ಪ್ರತಾಪ್ ಸಿಂಹ ಗೆಲುವನ್ನು ಸಂಭ್ರಮಿಸಲು ಬಿಜೆಪಿ ಕಾರ್ಯಕರ್ತರು ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಬಳಿಕ ಪ್ರತಾಪ್ ಸಿಂಹ ಮೊದಲ ಭೇಟಿ ಹಿನ್ನೆಲೆಯಲ್ಲಿ ಕೊಡಗಿನ ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸಿದ್ದಾರೆ. ಈ ವೇಳೆ ಕಾಯರ್ಕಕರ್ತರು ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಕುಣಿದು ಸಂಭ್ರಮಿಸಿದ್ದಾರೆ.

ಸೋಮವಾರಪೇಟೆಯ ಕಕ್ಕೆಹೊಳೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ನೂರಾರು ಕಾರ್ಯಕರ್ತರು ಪ್ರತಾಪ್ ಸಿಂಹ ಅವರ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಪ್ರತಾಪ್ ಸಿಂಹ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ್ದು ಸಂಸದರಿಗೆ, ಹಾಸನದ ಪರಾಚಿತ ಬಿಜೆಪಿ ಅಭ್ಯರ್ಥಿ ಎ. ಮಂಜು ಸಾಥ್ ನೀಡಿದ್ದರು. ಮೆರವಣಿಗೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ಭಾರತೀಶ್ ಭಾಗಿಯಾಗಿದ್ದರು.

Comments

Leave a Reply

Your email address will not be published. Required fields are marked *