ಕೈ ಪರ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದ ಯವಕನ ಮೇಲೆ ಬಿಜೆಪಿ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹೇಶ್ ಮದನಕರ್(22) ಎಂಬ ಯುವಕ, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ ಆರ್ ಪಾಟೀಲ್ ಪರ ಗ್ರಾಮದಲ್ಲಿ ಪ್ರಚಾರ ಮಾಡಿದ್ದ. ಇದರಿಂದ ಕೆರಳಿದ್ದ ಬಿಜೆಪಿ ಕಾರ್ಯಕರ್ತರಾದ ರಾಜು ಹಾಗೂ ತಿಪ್ಪಣ್ಣ ಎಂಬವರ ಮಹೇಶನನ್ನು ಹುಡುಕಿಕೊಂಡು ಹೋಗಿ ಕೊಡಲಿಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ತೀವ್ರ ರಕ್ತಸ್ರಾವದಿಂದ ಮಹೇಶ್ ಅಲ್ಲೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಮಹೇಶನನ್ನು ಸ್ಥಳೀಯರು ಕಲಬುರಗಿ ಜಿಲ್ಲಾಸ್ಪತ್ರೆ ದಾಖಲಿಸಿದ್ದಾರೆ. ಈ ಘಟನೆ ಕುರಿತಂತೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಕುರಿತಂತೆ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *