ಸೋಲಿನ ಪರಾಮರ್ಶೆ ಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್

ರಾಯಚೂರು: ಸೋಲಿನ ಪರಾಮರ್ಶೆ ಸಭೆಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಗಳಗಳನೆ ಕಣ್ಣೀರಿಟ್ಟಿದ್ದಾರೆ.

ರಾಯಚೂರು ನಗರದ ಹೊರವಲಯದಲ್ಲಿನ ಹರ್ಷಿತಾ ಗಾರ್ಡನ್ ನಲ್ಲಿ ನಡೆದ ಸಭೆಯಲ್ಲಿ ತಿಪ್ಪರಾಜು ಸೋತಿದ್ದಕ್ಕೆ ಅತ್ತಿದ್ದಾರೆ. 2013 ರಲ್ಲಿ ಗೆದ್ದು ಶಾಸಕನಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿಯೇ ಅಷ್ಟೊಂದು ಅಭಿವೃದ್ಧಿ ಆಗಿಲ್ಲ. ನನ್ನ ಹಣೆಬರಹದಲ್ಲಿ ಸೋಲು ಬರೆದಿದೆ ಅನ್ನಿಸುತ್ತೆ, ಯಾರ ಬಗ್ಗೆಯೂ ದೋಷಿಸಿದ್ರು ಪ್ರಯೋಜನ ಇಲ್ಲ ಎಂದರು.

ಮತದಾರರಿಗೆ ಅಭಿನಂದನೆ ಹಾಗೂ ಸೊಲಿನ ಆತ್ಮಾವಲೋಕನಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಂಬರುವ ಲೋಕಸಭಾ ಚುನಾವಣೆಗೆ ರಾಯಚೂರು ಲೊಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ನಾನೇನು ಸನ್ಯಾಸಿ ಅಲ್ಲ ಅಂತ ತಿಪ್ಪರಾಜು ಹವಾಲ್ದಾರ್ ಹೇಳಿದ್ದಾರೆ.

https://youtu.be/oDPAG0iom-I

Comments

Leave a Reply

Your email address will not be published. Required fields are marked *