ಬ್ಲೂ ಫಿಲಂಗಳ ಬಗ್ಗೆ ಹೆಚ್‍ಡಿಕೆಗೆ ಚೆನ್ನಾಗಿಯೇ ಗೊತ್ತಿರುತ್ತೆ: ಅಶ್ವಥ್ ನಾರಾಯಣ

– ಇಬ್ಬರೂ ಬೇಜವಾಬ್ದಾರಿ ಹೇಳಿಕೆ ಕೊಡ್ತಿದ್ದಾರೆ

ಬೆಂಗಳೂರು: ಬ್ಲೂ ಫಿಲಂ ಬಗ್ಗೆ ಹೆಚ್‍ಡಿಕೆಗೆ ಹೇಗೆ ಗೊತ್ತಾಯ್ತು? ಹೇಗೆ ಕಲಿತ್ಕೊಂಡ್ರು ಅವ್ರು? ಬ್ಲೂ-ಫಿಲಂಗಳ ಬಗ್ಗೆ ಹೆಚ್‍ಡಿಕೆಗೆ ಚೆನ್ನಾಗಿಯೇ ಗೊತ್ತಿರುತ್ತೆ ಎಂದು ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅಶ್ವತ್ ನಾರಾಯಣ ಅವರು, ಉಪಚುನಾವಣೆ ಬಂದಾಗ ಕುಮಾರಸ್ವಾಮಿ ಕೂಗುಮಾರಿ ಥರ ಮಾತಾಡ್ತಾರೆ. ಉಪಚುನಾವಣೆಯ ವೇಳೆ ಹೆಚ್‍ಡಿಕೆ ಮನಸ್ಥಿತಿ ಕಳ್ಕೊಂಡು ಮಾತಾಡ್ತಾರೆ. ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಹೆಚ್‍ಡಿಕೆ ಸ್ಥಿಮಿತ ಕಳ್ಕೊಂಡು ಬೇಜವಾಬ್ದಾರಿ ಹೇಳಿಕೆ ಕೊಡ್ತಿದ್ದಾರೆ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಕಟೀಲ್ ಆರೋಪಕ್ಕೆ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ಸಾಕ್ಷ್ಯ ನೀಡಿದ ಬಿಜೆಪಿ

ಹೆಚ್‍ಡಿಕೆ ಆರ್‌ಎಸ್‌ಎಸ್ ಬಗ್ಗೆ ಆರೋಪ ಮಾಡಿದ್ದಾರೆ. ಹೆಚ್‍ಡಿಕೆ ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಅಪ್ರಸ್ತುತವಾಗಿ ಹೆಚ್‍ಡಿಕೆ ಆರ್‌ಎಸ್‌ಎಸ್ ವಿರುದ್ಧ ಟೀಕೆ ಮಾಡಿ ಪ್ರಸ್ತುತರಾಗಲು ಪ್ರಯತ್ನ ಪಡ್ತಿದ್ದಾರೆ. ಆರ್‌ಎಸ್‌ಎಸ್ ಕಚೇರಿಗೆ ಬಂದು ನೋಡಿ ಎಂದು ಹೆಚ್‍ಡಿಕೆಗೆ ಕಟೀಲ್ ಅವರು ಆಹ್ವಾನಿಸಿದ್ದಾರೆ. ಆದರೆ ಹೆಚ್‍ಡಿಕೆ ಅವರು ಆರ್‌ಎಸ್‌ಎಸ್ ಶಾಖೆಗೆ ಬ್ಲೂ-ಫಿಲಂ ನೋಡಲು ಬರ್ಲಾ ಎಂದು ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಕಿಡಿಕಾರಿದರು.

ಬ್ಲೂ ಫಿಲಂ ಬಗ್ಗೆ ಹೆಚ್‍ಡಿಕೆಗೆ ಹೇಗೆ ಗೊತ್ತಾಯ್ತು? ಹೇಗೆ ಕಲಿತ್ಕೊಂಡ್ರು ಅವ್ರು? ಬ್ಲೂ-ಫಿಲಂಗಳ ಬಗ್ಗೆ ಹೆಚ್‍ಡಿಕೆಗೆ ಚೆನ್ನಾಗಿಯೇ ಗೊತ್ತಿರುತ್ತೆ. ಸಿಂದಗಿ, ಹಾನಗಲ್ ನಲ್ಲಿ ಜೆಡಿಎಸ್‍ಗೆ ಜನ ಛೀಮಾರಿ ಹಾಕ್ತಾರೆ. ಜನರಿಗೂ ಗೊತ್ತಿದೆ ಜೆಡಿಎಸ್ ಬಂಡವಾಳ. ಸಿದ್ದರಾಮಯ್ಯ ಮತ್ತು ಹೆಚ್‍ಡಿಕೆ ಅವರು ಏಕೆ ಹೀಗೆ ಮಾತಾಡ್ತಿದ್ದಾರೆ ಎಂದು ಅವರವರ ಪಕ್ಷದ ಕಾರ್ಯಕರ್ತರಿಗೂ ಗೊತ್ತಿದೆ. ಸಾಧನೆಗಳನ್ನು ಹೇಳಿಕೊಂಡು ಮತಕೇಳಿ ಹೆಚ್‍ಡಿಕೆ ಮಾನಸಿಕ ಸ್ಥಿಮಿತ ಕಳ್ಕೊಂಡಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಹೇಳಿಕೆ ಕೊಟ್ಟಿದ್ದಕ್ಕೆ ಹೆಚ್‍ಡಿಕೆ ಕ್ಷಮೆ ಕೇಳಿ ಹೇಳಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ

Comments

Leave a Reply

Your email address will not be published. Required fields are marked *