ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ, ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ: ಈಶ್ವರಪ್ಪ ವ್ಯಂಗ್ಯ

ದಾವಣಗೆರೆ: ಅಧಿಕಾರ ಕಳೆದುಕೊಂಡ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಸಚಿವರು, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಳಲು ಬಯಸುತ್ತೇನೆ. ನೀವು ಸಿಎಂ ಆದಾಗ ನಾವು ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡಿದ್ದೇವು. ನಿನ್ನೆವರೆಗೂ ಪರಿಹಾರ ಬಂದಿಲ್ಲ ಎಂದು ಆರೋಪ ಮಾಡುತ್ತಾ ಬಂದಿರಿ. ಈಗ ಕೇಂದ್ರ ಸರ್ಕಾರವು ನರೆ ಪರಿಹಾರ ನೀಡಿದೆ. ಆದರೆ ನೀವು ಇಷ್ಟೇನಾ ಎಂದು ಕೇಳುತ್ತಿರಾ ಎಂದು ಕಿಡಿಕಾರಿದರು.

ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭಾ ವಿರೋಧ ಪಕ್ಷದ ಸ್ಥಾನಕ್ಕೆ ಪ್ರಯತ್ನ ಪಡುತ್ತಿದ್ದಾರೆ. ಇತ್ತ ಸಿದ್ದರಾಮಯ್ಯ ಅವರು ಕೂಡ ವಿಪಕ್ಷ ಸ್ಥಾನ ಪಡೆಯಲು ಮುಂದಾಗುತ್ತಿದ್ದಾರೆ. ಟೀಕೆ ಮಾಡ ಬೇಕು, ವಿರೋಧ ಸ್ಥಾನ ಸಿಗುತ್ತೋ ಇಲ್ಲವೂ ಎಂದು ವಿಲಿ ವಿಲಿ ಒದ್ದಾಡುತ್ತಿದ್ದಾರೆ. ಈಗ ಆರ್ಥಿಕ ಸ್ಥಿತಿ ಬಗ್ಗೆ ಮಾತನಾಡುತ್ತಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ವಿರುದ್ಧ ಟೀಕೆ ಮಾಡ ಬೇಕೆಂದು ಈಗ ಹೀಗೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಅಯೋಧ್ಯ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಕೊಂಡಿದೆ. ಇಡಿ ದೇಶವೇ ಹೆಮ್ಮೆ ಪಡುವಂತಹ ತೀರ್ಪು ಬರಲಿದೆ ಎನ್ನುವ ವಿಶ್ವಾಸವಿದೆ. ಯಾರಿಗೂ ನೋವಾಗದ ರೀತಿ ತೀರ್ಪು ಬರಲಿದೆ ಎಂದರು.

Comments

Leave a Reply

Your email address will not be published. Required fields are marked *