ಕಳೆದ ಎರಡು ವರ್ಷದಿಂದ ನ್ಯಾಯಕ್ಕಾಗಿ ಹೋರಾಟ ಮಾಡ್ತಿದ್ದೇನೆ: ಮಹಿಳೆ

ಬೆಂಗಳೂರು: ಶಾಸಕರಿಂದ ನನಗೆ ಮೋಸ ಆಗಿದೆ. ಈ ಬಗ್ಗೆ ಕಳೆದ ಎರಡು ವರ್ಷದಿಂದ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಬಿಜೆಪಿ ಶಾಸಕನಿಗೆ ಬ್ಲಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಆರೋಪಿಸಿದರು.

ವಕೀಲ ಜಗದೀಶ್ ಜೊತೆ ತನಗಾದ ಅನ್ಯಾಯದ ಬಗ್ಗೆ ವೀಡಿಯೋ ಕಾಲ್ ಮೂಲಕ ವಿವರಿಸಿರುವ ಮಹಿಳೆ, ಶಾಸಕರು ನನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ. ಅವರು ನನ್ನ ಜೀವನ ಹಾಳು ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕಾರ್ಯಕರ್ತರು ನಿನ್ನೆ ಶಾಸಕರ ವಿರುದ್ಧ ಹೇಳಿಕೆ ಕೊಡುವಂತೆ ಬಲವಂತ ಮಾಡಿದ್ದಾರೆ. ಕಾಂಗ್ರೆಸ್‍ನವರು ಮಾಡಿಸಿದ್ದಾರೆ ಅಂತಾ ಹೇಳು ಎಂದು ಒತ್ತಡ ಹಾಕುತ್ತಿದ್ದಾರೆ. ಜೊತೆಗೆ ವಿಧಾನಸೌಧ ಪೊಲೀಸರು ನನ್ನನ್ನ ಕರೆದುಕೊಂಡು ಹೋಗಿ ನಿನ್ನೆ ಇಡೀ ದಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೂಡಿ ಹಾಕಿದ್ದಾರೆ ಎಂದರು.

ಈ ಬಗ್ಗೆ ವಿಚಾರ ಏನು ಕೇಳಿದರೂ, ಪೊಲೀಸರು ಸಮಯಕ್ಕೆ ಸರಿಯಾಗಿ ಊಟ ತಿಂಡಿ ಬರುತ್ತದೆ. ತಿಂದು ಸುಮ್ಮನೆ ಕೂರುವಂತೆ ಹೇಳಿದ್ದಾ ರೆ ಹೊರತು ಯಾವ ವಿಚಾರಕ್ಕಾಗಿ ಕೆರದುಕೊಂಡು ಬಂದಿದ್ದೇವೆ ಎನ್ನುವುದರ ಬಗ್ಗೆ ಹೇಳಲೇ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸೇಡಂ ಬಿಜೆಪಿ ಶಾಸಕ ತೇಲ್ಕೂರ್‌ಗೆ ಮಹಿಳೆ ಬ್ಲಾಕ್‍ಮೇಲ್

ರಾತ್ರಿ 9 ಗಂಟೆಗೆ ಪೊಲೀಸ್ ಠಾಣೆಯಿಂದ ಹೊರಗೆ ಬಿಟ್ಟಿದ್ದಾರೆ. ಆದರೆ ಈಗಲೂ ಮನೆ ಹತ್ತಿರ ಪೊಲೀಸರು ಇದ್ದಾರೆ. ಈ ಎಲ್ಲಾ ವ್ಯವಸ್ಥೆಯಿಂದ ನಾನು ಬದುಕಿದರೆ ಸಾಕು ಎನಿಸುತ್ತಿದೆ. ನನಗೆ ಮೋಸ ಆಗಿದೆ, ನನಗೆ ನ್ಯಾಯಕೊಡಿಸಿ ಎಂದು ಸಿಎಂಗೆ ಟ್ವೀಟ್ ಮಾಡಿದ್ದರಿಂದ ಇಷ್ಟೆಲ್ಲ ಸಮಸ್ಯೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ಶಾಸಕನಿಗೆ ಮಹಿಳೆಯಿಂದ ಬ್ಲ್ಯಾಕ್‍ಮೇಲ್ – ತಮಿಳುನಾಡಿನಲ್ಲಿ ನಾಲ್ವರು ವಶ

Comments

Leave a Reply

Your email address will not be published. Required fields are marked *