ಸದನದಲ್ಲಿ ಕನಕಪುರ ಬಂಡೆಯನ್ನು ಹೊಗಳಿದ ಬಿಜೆಪಿ ಶಾಸಕ ಸಿಸಿ ಪಾಟೀಲ್

ಬೆಳಗಾವಿ: ಕನ್ನಡ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ಶಾಸಕ ಸಿಸಿ ಪಾಟೀಲ್ ಅವರು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರನ್ನು ಹೊಗಳಿದಿದ್ದಾರೆ.

ನವಲಗುಂದ, ನರಗುಂದ ಭಾಗದ ನೀರಾವರಿ ಯೋಜನೆಯ ಬಗ್ಗೆ ಶಾಸಕ ಶಂಕರಪಾಟೀಲ್ ಮುನೇನಕೊಪ್ಪ ಪ್ರಶ್ನೆ ಕೇಳುವ ಸಮಯದಲ್ಲಿ ಸಿಸಿ ಪಾಟೀಲ್ ಮಧ್ಯಪ್ರವೇಶ ಮಾಡಿ ಶಿವಕುಮಾರ್ ಡೈನಾಮಿಕ್ ಇದ್ದಾರೆ. ಕನಕಪುರದ ಬಂಡೆಯಂತಹ ಸಾಮಥ್ರ್ಯ ಹೊಂದಿರುವ ಶಿವಕುಮಾರ್ ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೂ ತಮ್ಮ ಸಾಮಥ್ರ್ಯ ಬಳಸಿ ಅಭಿವೃದ್ಧಿ ಪಡಿಸಬೇಕು ಎಂದು ಹೇಳಿದರು.

ಈ ಸಮಯದಲ್ಲಿ ಸ್ಪೀಕರ್ ರಮೇಶಕುಮಾರ್ ಮಧ್ಯಪ್ರವೇಶ ಮಾಡಿ, ಏನ್ರೀ ಶಿವಕುಮಾರ್ ಎಲ್ಲೆಲ್ಲೂ ನಿಮ್ಮದೇ ಮಾತು. ಏನ್ರಿ ಯಡಿಯೂರಪ್ಪನವರೇ ಎಂದು ಹೇಳಿ ಶಿವಕುಮಾರ್ ದೀರ್ಘ ಆಯುಶ್ಮಾನ್ ಭವ ಎಂದಾಗ ಸದನ ನಗೆಗಡಲಲ್ಲಿ ತೇಲಾಡಿತು.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹಾನಗಲ್ ಶಾಸಕ ಉದಾಸಿ ಇಂದು ಕಾಣಿಸಿಕೊಂಡಿದ್ದರು. ಸದನದಲ್ಲಿ ಪ್ರಶ್ನೆ ಕೇಳಲು ಎದ್ದು ನಿಂತಾಗ, ಎಲ್ಲಿ ಹೋಗಿದ್ರಿ ಇಷ್ಟು ದಿನ? ಅಸೆಂಬ್ಲಿಯಲ್ಲಿ ಕಾಣಿಸುತ್ತಿರಲಿಲ್ಲ ಎಂದು ಸ್ಪೀಕರ್ ಪ್ರಶ್ನೆ ಮಾಡಿದರು. ಇದಕ್ಕೆ ಆರೋಗ್ಯ ಸರಿ ಇರಲಿಲ್ಲ, ಹಾಗಾಗಿ ಬಂದಿರಲಿಲ್ಲ ಎಂದು ಉದಾಸಿ ಉತ್ತರಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *