ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮ: ಸಿಎಂಗೆ ತಿರುಗೇಟು ನೀಡಲು ಬಿಜೆಪಿ ಮಾಸ್ಟರ್ ಗೇಮ್

ಬೆಂಗಳೂರು: ಲಿಂಗಾಯತ ವೀರಶೈವ ಧರ್ಮ ಸ್ಥಾಪನೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಿರುವ ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ರಾಜ್ಯದ ಪ್ರಮುಖ ಲಿಂಗಾಯತ ಮಠಕ್ಕೆ ಕರೆದೊಯ್ಯಲು ಬಿಜೆಪಿ ಈಗ ಸಿದ್ಧತೆ ನಡೆಸಿದೆ.

ನಾಲ್ಕು ಜಿಲ್ಲೆಗಳ ಪ್ರವಾಸಕ್ಕಾಗಿ ಮಾರ್ಚ್ 25ರಂದು ರಾತ್ರಿ ಬೆಂಗಳೂರಿಗೆ ಅಮಿತ್ ಶಾ ಆಗಮಿಸಲಿದ್ದಾರೆ. ಎರಡು ದಿನಗಳ ಮಧ್ಯ ಕರ್ನಾಟಕ ಭೇಟಿ ವೇಳೆ ನಾಲ್ಕು ಮಠಗಳಿಗೆ ಶಾ ಭೇಟಿ ನೀಡಲಿದ್ದಾರೆ.

ಮಾರ್ಚ್ 26ರಂದು ಬೆಳಗ್ಗೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಸಿದ್ಧಗಂಗಾ ಶಿವಕುಮಾರ ಶ್ರೀಗಳನ್ನು ಶಾ ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ. ಮಾರ್ಚ್ 27ರಂದು ದಾವಣಗೆರೆ ಜಿಲ್ಲೆಯ ಸಿರಿಗೆರೆ ಮಠ, ಮಾದಾರ ಚನ್ನಯ್ಯ ಸ್ವಾಮೀಜಿ ಮಠ ಮತ್ತು ಚಿತ್ರದುರ್ಗದ ಮುರುಘಾ ಮಠಕ್ಕೆ ಶಾ ಭೇಟಿ ಕೊಡಲಿದ್ದಾರೆ.

ಅಮಿತ್ ಶಾ ಫೆಬ್ರವರಿ ನಾಲ್ಕನೇಯ ವಾರದಲ್ಲಿ ಎರಡು ದಿನ ಕರಾವಳಿ ಜಿಲ್ಲೆಯಲ್ಲಿ ಪಕ್ಷದ ಪ್ರಚಾರ ನಡೆಸಿದ್ದರು. ಫೆ.21ರಂದು ರಾತ್ರಿ ಉಡುಪಿಯಲ್ಲಿ ಪೇಜಾವರ ಮಠಕ್ಕೆ ಆಗಮಿಸಿದ ಅಮಿತ್ ಶಾ, ಮೂರು ಜಿಲ್ಲೆಯ ಸ್ವಾಮೀಜಿಗಳ ಜೊತೆ ಸಮಾಲೋಚನೆ ಮಾಡಿದ್ದರು.

Comments

Leave a Reply

Your email address will not be published. Required fields are marked *