ಸಿದ್ದರಾಮಯ್ಯ ಗೋಮಾಂಸ ತಿನ್ನೋದಾದ್ರೆ ತಿನ್ನಲಿ, ವಕೀಲಿಕೆ ಮಾಡೋದು ಬೇಡ: ಛಲವಾದಿ ನಾರಾಯಣಸ್ವಾಮಿ  

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಗೋಮಾಂಸ ತಿನ್ನೋದಾದ್ರೆ ತಿನ್ನಲಿ. ಆದರೆ ವಕೀಲಿಕೆ ಮಾಡೋದು ಬೇಡ ಎಂದು ಬಿಜೆಪಿ ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ತುಮಕೂರಿನಲ್ಲಿ ಗೋಮಾಂಸ ಸೇವನೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರ ಸಂಬಂಧ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ನಿನ್ನೆ ತುಮಕೂರಿನಲ್ಲಿ ಹೇಳಿಕೆ ನೀಡಿದ್ದಾರೆ. ದಲಿತರು, ಹಿಂದುಳಿದವರು, ಹಿಂದೂಗಳು, ಕ್ರೈಸ್ತರು ಗೋಮಾಸ ತಿಂತಾರೆ ಅಂದಿದ್ದಾರೆ. ಹಾಗಾಗಿ ಗೋ ಮಾಂಸ ನಿಷೇಧ ಮಾಡಬಾರದು ಅಂದಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಗೋಮಾಂಸ ತಿನ್ನೋದಾದ್ರೆ ತಿನ್ನಲಿ. ವಕೀಲಿಕೆ ಮಾಡೋದು ಬೇಡ. ಸರ್ಕಾರ ನಿರ್ಧಾರ ತೆಗೆದುಕೊಂಡಾಗ ಅದಕ್ಕೆ ಬೆಂಬಲ ನೀಡಬೇಕು. ಆದರೆ ಅದನ್ನ ವಿರೋಧಿಸೋದು ಬೇಡ. ಅವರು ದೇವಸ್ಥಾನಕ್ಕೆ ಹೋಗುವಾಗ ಮಾಂಸ ತಿಂದು ಹೋದ್ರು. ಅದನ್ನೂ ಸಮರ್ಥನೆ ಮಾಡಿಕೊಂಡರು ಎಂದರು. ಇದನ್ನೂ ಓದಿ: ಟಿಪ್ಪು ದೇಶ ಭಕ್ತ – ಮತಾಂಧ ಆಗಿದ್ದರೆ ಹಿಂದೂ ದೇವಾಲಯಗಳು ಉಳೀತಿತ್ತಾ?: ಸಿದ್ದರಾಮಯ್ಯ

ಸಿದ್ದರಾಮಯ್ಯಗೆ ಬಜೆಪಿ, ಆರ್‍ಎಸ್‍ಎಸ್ ಬಗ್ಗೆ ಮಾತನಾಡೋ ಚಟ. ಅವರು ಬೇರೆ ಬೇರೆ ಸಂದರ್ಭದಲ್ಲಿ ಮಾತನಾಡುವಾಗ ದಲಿತರನ್ನ ಹಿಂದುಳಿದವರನ್ನ ಎತ್ತಿ ಕಟ್ಟಿ ಮಾತಾಡೋ ಚಟ. ದೇಶ ದೊಡ್ಡದು, ದೇಶ ಕಟ್ಟೋ ಕೆಲಸ ಮಾಡಬೇಕು. ವಿಷ ಬೀಜ ಬಿತ್ತೋ ಕೆಲಸ ಮಾಡಬಾರದು ಎಂದು ನಾರಾಯಣಸ್ವಾಮಿಯವರು ಗರಂ ಆದರು.

Comments

Leave a Reply

Your email address will not be published. Required fields are marked *