ವಾಮಾಚಾರದ ಮೂಲಕ ಬಿಜೆಪಿ ಗುಜರಾತಿನಲ್ಲಿ ಗೆದ್ದಿದೆ: ಈಶ್ವರ್ ಖಂಡ್ರೆ

ಬೀದರ್: ವಾಮಾಚಾರದ ಮೂಲಕ ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಜೆಪಿ ಗುಜರಾತ್ ನಲ್ಲಿ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುಜರಾತಿಗೂ ಕರ್ನಾಟಕಕ್ಕೂ ತುಂಬಾ ವ್ಯತ್ಯಾಸವಿದ್ದು, ಈ ಫಲಿತಾಂಶ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಬೇರು ಸಮೇತ ಭದ್ರವಾಗಿದ್ದು, ಗುಜರಾತಿನಲ್ಲಿ ಕಾಂಗ್ರೆಸ್ ತೀವ್ರ ಪೈಪೋಟಿ ನೀಡಿದೆ ಎಂದು ಈಶ್ವರ್ ತಿಳಿಸಿದ್ದಾರೆ.

2019ಕ್ಕೆ ರಾಹುಲ್ ಗಾಂಧಿ ಮೋದಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಪ್ರಧಾನಿಯಾಗುತ್ತಾರೆ ಎಂದು ಅವರು ಭವಿಷ್ಯ ನುಡಿದರು.

Comments

Leave a Reply

Your email address will not be published. Required fields are marked *