ಜನರಿಗೆ 14 ಕೋಟಿ ರೂ. ವಂಚಿಸಿದ ಆಫೀಸರ್ ಅರೆಸ್ಟ್

ಚಂಡೀಗಢ: ಬಾರ್ಡರ್ ಫೋರ್ಸ್ ಆಫೀಸರ್(ಬಿಎಫ್‍ಒ) ಜನರಿಗೆ 14 ಕೋಟಿ ರೂ. ವಂಚಿಸಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಗುರ್ಗಾಂವ್ ಜಿಲ್ಲೆಯ ಮನೇಸರ್‍ನಲ್ಲಿರುವ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಪ್ರಧಾನ ಕಚೇರಿಯಲ್ಲಿ(ಎನ್‍ಎಸ್‍ಜಿ) ನಿಯೋಜನೆಗೊಂಡಿದ್ದ ಬಿಎಸ್‍ಎಫ್ ಡೆಪ್ಯುಟಿ ಕಮಾಂಡೆಂಟ್ ಪ್ರವೀಣ್ ಯಾದವ್, ಭಾರತೀಯ ಪೊಲೀಸ್ ಸೇವಾ ಅಧಿಕಾರಿಯಂತೆ ನಟಿಸಿ ಜನರಿಗೆ 125 ಕೋಟಿ ರೂ. ವಂಚಿಸಿದ್ದರು. ಇದನ್ನೂ ಓದಿ: ಮಗುವಿನ ಎದೆಗೂಡಿನ ಪಕ್ಕದಲ್ಲಿದ್ದ ಎಲುಬಿನ ಬಾಲ ತೆಗೆದುಹಾಕಿದ ವೈದ್ಯರು

ಪೊಲೀಸರಿಗೆ ಈ ಕುರಿತು ಮಾಹಿತಿ ಸಿಕ್ಕಿದ್ದು, ಆತನನ್ನು ಬಂಧಿಸಿದ್ದಾರೆ. ದಾಳಿಯ ವೇಳೆ 14 ಕೋಟಿ ರೂ., 1 ಕೋಟಿ ಮೌಲ್ಯದ ಚಿನ್ನಾಭರಣಗಳು, ಬಿಎಂಡಬ್ಲ್ಯು ಮತ್ತು ಮರ್ಸಿಡಿಸ್ ಸೇರಿದಂತೆ ಏಳು ಐಷಾರಾಮಿ ಕಾರುಗಳನ್ನು ಆತನಿಂದ ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗೆ ಸಹಾಯ ಮಾಡಿದ ಪತ್ನಿ ಮಮತಾ ಯಾದವ್, ಸಹೋದರಿ ರಿತು ಮತ್ತು ಸಹಚರನನ್ನು ಸಹ ಬಂಧಿಸಿದ್ದಾರೆ.

ಹೇಗೆ?
ಗುರ್ಗಾಂವ್ ಪೊಲೀಸ್ ಎಸಿಪಿ ಕ್ರೈಂ ಪ್ರೀತ್ ಪಾಲ್ ಸಿಂಗ್ ಈ ಕುರಿತು ಮಾತನಾಡಿದ್ದು, ಐಪಿಎಸ್ ಅಧಿಕಾರಿಯಂತೆ ಯಾದವ್ ನಟಿಸಿದ್ದು, ಅವರು ಎನ್‍ಎಸ್‍ಜಿ ಕ್ಯಾಂಪಸ್‍ನಲ್ಲಿ ನಿರ್ಮಾಣ ಗುತ್ತಿಗೆ ಪಡೆಯುವ ನೆಪದಲ್ಲಿ ಜನರಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ್ದಾರೆ. ಅವರು ವಂಚಿಸಿದ ಎಲ್ಲ ಹಣವನ್ನು ಎನ್‍ಎಸ್‍ಜಿ ಹೆಸರಿನಲ್ಲಿ ನಕಲಿ ಖಾತೆಗೆ ವರ್ಗಾಯಿಸಿದ್ದಾರೆ. ಈ ಖಾತೆಯನ್ನು ಆಕ್ಸಿಸ್ ಬ್ಯಾಂಕ್‍ನಲ್ಲಿ ಮ್ಯಾನೇಜರ್ ಆಗಿರುವ ಅವರ ಸಹೋದರಿ ರಿತು ಯಾದವ್ ತೆರೆದಿದ್ದಾಳೆ ಎಂದು ತಿಳಿಸಿದ್ದಾರೆ.

ಷೇರು ಮಾರುಕಟ್ಟೆಯಲ್ಲಿ ಪ್ರವೀಣ್ ಯಾದವ್ 60 ಲಕ್ಷ ನಷ್ಟ ಅನುಭವಿಸಿದ್ದು, ಪರಿಣಾಮ ಜನರನ್ನು ವಂಚಿಸಿ ಹಣ ವಸೂಲಿ ಮಾಡಲು ಯೋಜನೆ ರೂಪಿಸಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಟ್ಟದಾಗಿ ಮುಟ್ಟಿದ್ದಕ್ಕಾಗಿ ಛೀಮಾರಿ ಹಾಕಿದ ಮಹಿಳೆಯನ್ನೇ ಕೊಲ್ಲಲು ಮುಂದಾದ ವ್ಯಕ್ತಿ ಅರೆಸ್ಟ್

ಯಾದವ್ ಇತ್ತೀಚೆಗೆ ಅಗರ್ತಲಾದಲ್ಲಿ ಪೋಸ್ಟಿಂಗ್ ಆಗಿತ್ತು. ಆದರೆ ಅವರು ಜನರನ್ನು ವಂಚಿಸುವ ಮೂಲಕವೇ ತುಂಬಾ ಸಂಪತ್ತನ್ನು ಗಳಿಸಿದ್ದರು. ಪರಿಣಾಮ ಕೆಲವು ದಿನಗಳ ಹಿಂದೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು ಎಂದು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *