ಹುಟ್ಟುಹಬ್ಬದ ದಿನವೇ ಬಾಲಕ ನೇಣಿಗೆ ಶರಣು!

ಮೈಸೂರು: ಹುಟ್ಟುಹಬ್ಬದ ದಿನವೇ ಬಾಲಕ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಮೈಸೂರಿನ ಜನತಾ ನಗರದಲ್ಲಿ ನಡೆದಿದೆ.

ಗಣೇಶ್ (13) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಗಣೇಶ್ ಟ್ರಿನಿಟಿ ಶಾಲೆಯ 7ನೇ ತರಗತಿ ಓದುತ್ತಿದ್ದನು. ಶನಿವಾರ ಗಣೇಶ್ ಹುಟ್ಟಿದ ದಿನ ಆಗಿತ್ತು. ಇದೇ ದಿನ ಬಾಲಕನ ತಂದೆ- ತಾಯಿ ಸಂಬಂಧಿಕರ ಮನೆಗೆ ಹೊರಟ್ಟಿದ್ದರು. ಈ ವೇಳೆ ಗಣೇಶ್ ತಾನೂ ಅವರ ಜೊತೆ ಬರುವುದಾಗಿ ಮನವಿ ಮಾಡಿಕೊಂಡಿದ್ದನು. ಆದರೆ ಪೋಷಕರು ಆತನನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಲು ಒಪ್ಪಲಿಲ್ಲ. ಪೋಷಕರು ತಮ್ಮ ಮಗ ಗಣೇಶ್‍ನನ್ನು ಬಿಟ್ಟು ಸಂಬಂಧಿಕರ ಮನೆಗೆ ಹೋಗಿದ್ದರು.

ಪೋಷಕರು ತನ್ನನ್ನು ಬಿಟ್ಟು ಹೋಗಿದ್ದಾರೆ ಎಂದು ಬೇಸತ್ತ ಗಣೇಶ್ ತನ್ನ ತಂದೆ – ತಾಯಿ ಸಂಬಂಧಿಕರ ಮನೆಯಿಂದ ಹಿಂತಿರುಗುವ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಸಂಬಂಧಿಕರ ಮನೆಯಿಂದ ಸಂಜೆ ವಾಪಸ್ ಬರುವಷ್ಟರಲ್ಲಿ ಗಣೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *