ಅಪಘಾತದಲ್ಲಿ ಅಣ್ಣ, ತಂಗಿ ಸಾವು – ಶವಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಗ್ರಾಮಸ್ಥರು

ಆನೇಕಲ್: ಇಂದು ಮುಂಜಾನೆ ಕೆಲಸಕ್ಕೆಂದು ಬೈಕಿನಲ್ಲಿ ಹೊರಟಿದ್ದ ವೇಳೆ ಅಪಘಾತ ಸಂಭವಿಸಿ ಅಣ್ಣ, ತಂಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರದ ನೆರಿಗಾ ಗ್ರಾಮದಲ್ಲಿ ನಡೆದಿದೆ.

ರತ್ನಮ್ಮ ಮತ್ತು ಗಿರೀಶ್ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಗಳು. ಅತಿ ವೇಗವಾಗಿ ಬಂದ ನೀರಿನ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದಿದ್ದು, ಅಪಘಾತವಾದ ರಭಸಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ತಮಿಳುನಾಡಿನಿಂದ ಬಂದು ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ನೆರಿಗಾ ಗ್ರಾಮದಲ್ಲಿ ಇಬ್ಬರು ವಾಸವಿದ್ದರು. ಇಂದು ಮುಂಜಾನೆ 5.30ರ ಸಮಯದಲ್ಲಿ ಕೆಲಸಕ್ಕೆ ತೆರಳಲು ಇಬ್ಬರು ನೆರಿಗಾ ಗ್ರಾಮದಿಂದ ಗುಂಜೂರು ಕಡೆ ತೆರಳಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಮೃತರಿಗೆ ಸಂಬಂಧಿಕರು ಇಲ್ಲದ ಕಾರಣ ಅಂತ್ಯ ಸಂಸ್ಕಾರ ನಡೆಸಲು ಕೂಡ ಯಾರು ಇರಲಿಲ್ಲ. ಸದ್ಯ ಊರಿನ ಗ್ರಾಮಸ್ಥರೇ ಎಲ್ಲರಿಂದ ಹಣ ಸಂಗ್ರಹಿಸಿ ಶವಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ವರ್ತೂರು ಮುಖ್ಯರಸ್ತೆಯ ಗುಂಜೂರು ನಿಂದ ಸರ್ಜಾಪುರ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಪದೇ ಪದೇ ರಸ್ತೆ ಅಪಘಾತಗಳು ಆಗುತ್ತಿದೆ. ಹೀಗಾಗಿ ಮಾರ್ಗವಾಗಿ ಚಲಿಸುವ ಸಾರ್ವಜನಿಕರು ಆತಂಕ ಸೃಷ್ಟಿ ಮಾಡಿದೆ. ಅದರಲ್ಲೂ ಪೊಲೀಸರ ಕಣ್ಣು ತಪ್ಪಿಸಿ ಬರುವ ಭಾರೀ ಗಾತ್ರದ ಲಾರಿಗಳಿಂದ ಅಪಘಾತಗಳು ಆಗುತ್ತಿದ್ದು, ಗ್ರಾಮಸ್ಥರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಡಿವೈಎಸ್ಪಿ ನಂಜುಂಡಗೌಡ ಭೇಟಿ ಮಾಡಿ ಸ್ಥಳ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಸರ್ಜಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Comments

Leave a Reply

Your email address will not be published. Required fields are marked *