ಆಸ್ತಿ ವಿಚಾರಕ್ಕೆ ಅಣ್ಣ – ತಮ್ಮನ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಹೊಳಲೂರು ಗ್ರಾಮದಲ್ಲಿ ನಡೆದಿದೆ.

45 ವರ್ಷದ ರೇವಣ್ಣ ಅಣ್ಣನಿಂದಲೇ ಕೊಲೆಯಾದ ದುರ್ದೈವಿ. ಅಣ್ಣ ಪ್ರಕಾಶ್ ಹಾಗೂ ತಮ್ಮ ರೇವಣ್ಣ ನಡುವೆ ಅಡಿಕೆ ತೋಟದ ಜಮೀನು ವಿವಾದ ಕೋರ್ಟ್‍ನಲ್ಲಿತ್ತು. ಇದೇ ವಿಚಾರವಾಗಿ ಇಬ್ಬರಿಗೂ ಪದೇ ಪದೇ ಜಗಳ ನಡೆಯುತ್ತಿತ್ತು. ಇಂದು ಬೆಳಗ್ಗೆ ಜಮೀನಿಗೆ ಬಂದಿದ್ದ ರೇವಣ್ಣ ಹಾಗೂ ಪ್ರಕಾಶ್ ನಡುವೆ ಇದೇ ವಿಷಯಕ್ಕೆ ಜಗಳ ಏರ್ಪಟಿತ್ತು. ಈ ವೇಳೆ ಸಿಟ್ಟಿಗೆದ್ದ ಪ್ರಕಾಶ್ ಕೈಯಲ್ಲಿದ್ದ ಮಚ್ಚಿನಿಂದ ರೇವಣ್ಣನ ಮೇಲೆ ಹಲ್ಲೆ ನಡೆಸಿದ್ದ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರೇವಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಪ್ರಕಾಶ್‍ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *