ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮನವಿ ಮಾಡಿದ್ದು, ಇನ್ನೊಂದೆಡೆ ಕೋವಿಡ್-19 ನಿರ್ವಹಣೆಗೆ ತಮ್ಮ ಒಂದು ವರ್ಷದ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಿಎಂ, ಕೋವಿಡ್-19 ನಿರ್ವಹಣೆಗೆ ಒಂದು ವರ್ಷದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವುದಾಗಿ ತಿಳಿಸಿದ್ದಾರೆ. ಒಂದು ವರ್ಷದ ಸುಮಾರು 24 ಲಕ್ಷ ರೂ. ವೇತನವನ್ನು ದೇಣಿಗೆ ಸಿಎಂ ದೇಣಿಗೆ ನೀಡಿದ್ದಾರೆ. ಅಲ್ಲದೆ ಶಾಸಕರು, ಸಂಸದರು ಹಾಗೂ ಅಧಿಕಾರಿಗಳಿಗೂ ಕೂಡ ತಮ್ಮ ಕೈಲಾದ ದೇಣಿಗೆ ಕೊಡುವಂತೆ ಇದೇ ವೇಳೆ ಸಿಎಂ ಕರೆ ಕೊಟ್ಟಿದ್ದಾರೆ.
#ಕೊರೊನ ಸೋಂಕು ವಿರುದ್ಧದ ಹೋರಾಟಕ್ಕೆ ನನ್ನ ಒಂದು ವರ್ಷದ ಸಂಬಳವನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19' ಕ್ಕೆ ನೀಡುತ್ತಿದ್ದೇನೆ. ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಮಟ್ಟಿಗೆ ದೇಣಿಗೆ ನೀಡಿ ಈ ಹೋರಾಟಕ್ಕೆ ಬಲ ತುಂಬಬೇಕು ಎಂದು ಮನವಿ ಮಾಡುತ್ತೇನೆ.@BSYBJP #DonatetoCMRFCovid19 pic.twitter.com/GXuzVTuaua
— CM of Karnataka (@CMofKarnataka) April 1, 2020
ಕೋವಿಡ್_19 ತಡೆಗೆ ಇನ್ನು 14 ದಿನಗಳ ಕಾಲ ಲಾಕ್ ಡೌನ್ ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಯಾರೂ ಮನೆಯಿಂದ ಹೊರಬರದಿರುವ ಮೂಲಕ ಸೋಂಕು ಹರಡದಂತೆ ಎಚ್ಚರ ವಹಿಸುವಂತೆ ಸಿಎಂ ಮನವಿ ಮಾಡಿದ್ದಾರೆ.
ರಾಜ್ಯವು ಕೊರೊನಾ ತಡೆಯುವಲ್ಲಿ ಸಾಕಷ್ಟು ಯಶಸ್ವಿಯಾಗಿದೆ. ಆದರೆ ಇನ್ನೂ ನಮಗೆ ಅಪಾಯ ತಪ್ಪಿದ್ದಲ್ಲ. ರಾಜ್ಯವು ಸೋಂಕಿತರ ಸಂಖ್ಯೆಯಲ್ಲಿ ಮೂರನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಬಂದಿರುವುದು ಸಂತಸವಾಗಿದೆ. ಆದರೆ ಇನ್ನೂ 14 ದಿನ ಲಾಕ್ ಡೌನ್ ಕಟ್ಟು ನಿಟ್ಟಿನಿಂದ ಪಾಲನೆ ಆಗಬೇಕು. ಜನ ಸುರಕ್ಷತೆಯಿಂದ ಇರಿ, ಮನೆಯಲ್ಲೇ ಇರಿ. ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಿ ಎಂದು ಜನತೆಗೆ ಸಿಎಂ ಮನವಿ ಮಾಡಿದ್ದಾರೆ.
#ಕೋವಿಡ್_19 ತಡೆಗೆ ಇನ್ನು 14 ದಿನಗಳ ಕಾಲ ಲಾಕ್ ಡೌನ್ ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದ್ದು, ಯಾರೂ ಮನೆಯಿಂದ ಹೊರಬರದಿರುವ ಮೂಲಕ ಸೋಂಕು ಹರಡದಂತೆ ಎಚ್ಚರ ವಹಿಸಬೇಕೆಂದು ಮುಖ್ಯಮಂತ್ರಿ ಶ್ರೀ @BSYBJP ಅವರು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.#KarnatakaFightsCorona #IndiaFightsCorona pic.twitter.com/Won4QjPtwe
— CM of Karnataka (@CMofKarnataka) April 1, 2020

Leave a Reply