ಆರು ತಿಂಗಳಲ್ಲಿ ಬಿಎಸ್‍ವೈ ಮತ್ತೆ ಸಿಎಂ : ಉಮೇಶ್ ಕತ್ತಿ

ಚಿಕ್ಕೋಡಿ: 6 ತಿಂಗಳು ಒಳಗೆ ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಮುಂದಿನ 6 ತಿಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೆ ಬರುತ್ತೆ ಕಾದು ನೋಡಿ ಎಂದು ಬಿಜೆಪಿ ಮುಖಂಡ ಹಾಗೂ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ.

ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ಹಿರಣ್ಯಕೇಶಿ ನದಿಯಿಂದ ಕೆರೆ ತುಂಬುವ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಆಗುವುದು ಬಹು ದಿನ ಇಲ್ಲ. ಬಿಜೆಪಿಯವರು ಎಲ್ಲೂ ಹೋಗುವುದಿಲ್ಲ. ಇನ್ನು ಆರು ತಿಂಗಳಲ್ಲಿ ಯಡಿಯೂರಪ್ಪ ಸರ್ಕಾರ ರಚನೆ ಮಾಡುತ್ತಾರೆ. ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ ಇಲ್ಲ. ಸಚಿವ ರಮೇಶ ಜಾರಕಿಹೊಳಿ ಹಾಗೂ ಯಾವುದೇ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಅಧಿವೇಶನದಲ್ಲಿ ರೈತರ ಬೆಳೆ ಸಾಲವನ್ನ ಮಾತ್ರ ಮನ್ನಾ ಮಾಡುವರಿದ್ದಾರೆ. ಈ ಬಾರಿಯೂ ವಚನ ಭ್ರಷ್ಟ ಆಗದೆ ನುಡಿದಂತೆ ಬೆಳೆ ಸಾಲದ ಜೊತೆಗೆ ಸಂಪೂರ್ಣ ಸಾಲ ಮಾಡಬೇಕು ಎಂದು ಉಮೇಶ್ ಕತ್ತಿ ಆಗ್ರಹಿಸಿದರು.

Comments

Leave a Reply

Your email address will not be published. Required fields are marked *