ಯಾರೇ ತಪ್ಪು ಮಾಡಿದ್ರೂ ಐಟಿ ಅಧಿಕಾರಿಗಳು ಬಿಡಲ್ಲ: ಬಿಎಸ್‍ವೈ ಮೊದಲ ಪ್ರತಿಕ್ರಿಯೆ

ಶಿವಮೊಗ್ಗ: ಐಟಿ ದಾಳಿ ರಾಜಕೀಯ ಪ್ರೇರಿತ ಅಲ್ಲ, ಐಟಿ ಅಧಿಕಾರಿಗಳು ತಮ್ಮ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ನಾಳೆ ಎಲ್ಲ ಮಾಹಿತಿ ತಿಳಿಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಅಪ್ತ ಮನೆಯ ಮೇಲೆ ಐಟಿ ದಾಳಿ ಬಗ್ಗೆ ಶಿಕಾರಿಪುರದಲ್ಲಿ ಮೊದಲ ಪ್ರತಿಕ್ರಿಯೆ ನೀಡಿದ ಅವರು, ಆಪ್ತನ ಮನೆ ಮೇಲೆ ಐಟಿ ದಾಳಿಯಾಗಿರುವುದು ಮಾಧ್ಯಮದಿಂದ ಗೊತ್ತಾಗಿದೆ. ಉಮೇಶ್ ಅವರು ನನ್ನ ಜೊತೆ ಕೆಲಸ ಮಾಡುತ್ತಿದ್ದರು, ಬೊಮ್ಮಾಯಿಯವರ ಜೊತೆ ಕೆಲಸ ಮಾಡುತ್ತಿಲ್ಲ. ಐಟಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಐಟಿ ದಾಳಿಯ ಕುರಿತು ನಾಳೆ ಮಾಹಿತಿ ನೀಡಲಿದ್ದಾರೆ. ಈ ಮಾಹಿತಿ ಬಳಿಕ ನಾನು ಉತ್ತರ ನೀಡುತ್ತೇನೆ. ಯಾರೇ ತಪ್ಪು ಮಾಡಿದರು ಐಟಿ ಅಧಿಕಾರಿಗಳು ಬಿಡುವುದಿಲ್ಲ ಎಂದರು. ಇದನ್ನೂ ಓದಿ: ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ

ಐಟಿ ಅಧಿಕಾರಿಗಳು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಇದೊಂದು ರಾಜಕೀಯ ಪ್ರೇರಿತ ಐಟಿ ದಾಳಿ ಅಲ್ಲ, ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Comments

Leave a Reply

Your email address will not be published. Required fields are marked *