ಶಾಸಕರನ್ನು ಸೆಳೆಯಲು ಸ್ವಾಮೀಜಿಗಳ ಮೊರೆ ಹೋದ ಬಿಎಸ್‍ವೈ!

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರನ್ನು ಸೆಳೆಯಲು ಬಿ.ಎಸ್.ಯಡಿಯೂರಪ್ಪ ಅವರು ಸ್ವಾಮೀಜಿಗಳ ಮೊರೆ ಹೋಗಿದ್ದಾರೆ.

ರಾಜ್ಯದ ಕೆಲವು ಲಿಂಗಾಯಿತ ಮಠದ ಸ್ವಾಮೀಜಿಗಳ ಜೊತೆ ಬಿಎಸ್‍ವೈ ಮಾತುಕತೆ ನಡೆಸಿದ್ದು, ಅವರ ಮೂಲಕ ಶಾಸಕರಿಗೆ ಗಾಳ ಹಾಕುತ್ತಿದ್ದಾರೆ. ಹಿಂದೂ ಧರ್ಮದ ಉಳಿವಿಗೆ ಬಿಎಸ್‍ವೈ ಗೆ ಬೆಂಬಲ ನೀಡಬೇಕು ಎಂದು ಸ್ವಾಮೀಜಿಗಳು ಶಾಸಕರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್‍ಗೆ ಕರೆ ಮಾಡಿ ಬಿ.ಎಸ್.ಯಡಿಯೂರಪ್ಪಗೆ ಬೆಂಬಲ ಸೂಚಿಸಬೇಕೆಂದು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ವಾಮೀಜಿಗಳು ತಮ್ಮ ಶಾಸಕರಿಗೆ ಕರೆ ಮಾಡಿ ಶನಿವಾರ ನಡೆಯಲಿರುವ ವಿಶ್ವಾಸ ಮತಯಾಚನೆಯ ವೇಳೆ ಬಿಎಸ್ ಯಡಿಯೂರಪ್ಪ ಅವರನ್ನು ಬೆಂಬಲಿಸಬೇಕು ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *