ಬಿಎಸ್‍ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ- ಹೃದಯಾಘಾತದಿಂದ ಅಭಿಮಾನಿ ಸಾವು

ದಾವಣಗೆರೆ: ಬಿ.ಎಸ್ ಯಡಿಯೂರಪ್ಪ ಅವರಿಗೆ ಸಿಎಂ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಮುಖಂಡರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದ ಹುಣಸೆಮರದ ಚನ್ನಬಸಪ್ಪ ಮೃತಪಟ್ಟಿದ್ದಾರೆ. ಚನ್ನಬಸಪ್ಪ ವೀರಶೈವ ಲಿಂಗಾಯತ ಮುಖ್ಯಮಂತ್ರಿಯಾಗಿದ್ದು, ಬಿಎಸ್‍ವೈ ಸಿಎಂ ಆಗಿ ಅಧಿಕಾರ ಸ್ವೀಕರಿಸಿದಾಗ ಸಂಭ್ರಮಾಚರಣೆ ಮಾಡಿದ್ದರು. ಸಂಬಂಧಿಕರಿಗೆಲ್ಲ ಫೋನ್ ಮಾಡಿ ಸಂತೋಷ ಹಂಚಿಕೊಂಡಿದ್ದರು.

ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಒಬ್ಬರು ಸಿಎಂ ಆದ್ದರು ಎಂದು ಚನ್ನಬಸಪ್ಪ ಖುಷಿಪಟ್ಟಿದ್ದರು. ಆದರೆ ಶನಿವಾರ ಸಂಜೆ ಬಿಎಸ್‍ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ಸ್ನೇಹಿತರಿಗೆ ಕರೆ ಮಾಡಿ ಬೇಸರ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಕಣ್ಣೀರು ಹಾಕಿದ್ದರು. ಬೇಸರದಲ್ಲೇ ಇದ್ದ ಅವರು ಐದು ಗಂಟೆಯ ವೇಳೆಗೆ ಒಮ್ಮಿದೊಮ್ಮೆಲೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Comments

Leave a Reply

Your email address will not be published. Required fields are marked *