ಹೆದ್ದಾರಿಯಲ್ಲೇ ಹೊತ್ತಿ ಉರಿದ 22 ಮಂದಿ ಪ್ರಯಾಣಿಕರಿದ್ದ ಬಸ್!

ಕಾರವಾರ: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ.

ಮುಂಬೈನಿಂದ ಮಂಗಳೂರು ಕಡೆ ರಾಷ್ಟೀಯ ಹೆದ್ದಾರಿ 63ರ ಮೂಲಕ ಬಸ್ ಸಂಚರಿಸುತಿದ್ದು, 22 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗಲಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಜರಾಗಿ ಬೆಂಕಿ ನಂದಿಸಿದ್ದು ಘಟನೆ ಯಲ್ಲಾಪುರ ಠಾಣಾ ಪ್ಯಾಪ್ತಿಯಲ್ಲಿ ನಡೆದಿದ್ದು 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: 7 ಎಕರೆ ಆಸ್ತಿಗಾಗಿ 98 ವರ್ಷದ ವೃದ್ಧೆಯನ್ನೇ ಕಿಡ್ನಾಪ್‍ಗೈದ್ರು

Comments

Leave a Reply

Your email address will not be published. Required fields are marked *