ಸಾರಿಗೆ ಬಸ್ಸಿನಲ್ಲಿ ದಿಢೀರ್ ಬೆಂಕಿ – ಸಮಯಪ್ರಜ್ಞೆ ತೋರಿದ ಚಾಲಕ

ತುಮಕೂರು: ನಗರದ ಶಿವಕುಮಾರ್ ಸ್ವಾಮೀಜಿ ಸರ್ಕಲ್ ಬಳಿ ತುಮಕೂರು ನಗರ ಸಾರಿಗೆ ಬಸ್ಸೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದನ್ನು ಅರಿತ ಚಾಲಕ ತಕ್ಷಣವೇ ಪ್ರಯಾಣಿಕರನ್ನು ಕೆಳಗೆ ಇಳಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕ ಧಾವಿಸಿ ಬೆಂಕಿ ನಂದಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ತೊಂದರೆ ಸಂಭವಿಸಿಲ್ಲ.

ಶಾರ್ಟ್ ಸರ್ಕ್ಯೂಟ್​ನಿಂದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಮೊದಲು ಬಸ್ಸಿನಲ್ಲಿ ಹೋಗೆ ಕಾಣಿಸಿಕೊಂಡಿತ್ತು. ಬಳಿಕ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು.

ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Comments

Leave a Reply

Your email address will not be published. Required fields are marked *