ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು 50 ಜನರ ಪ್ರಾಣ!

ಮಡಿಕೇರಿ: ಚಾಲಕನ ಸಮಯಪ್ರಜ್ಞೆಯಿಂದ 50 ಪ್ರಯಾಣಿಕರ ಪ್ರಾಣ ಉಳಿದಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೋಯನಾಡು ಗ್ರಾಮದ ಬಳಿ ನಡೆದಿದೆ.

ಬಸ್ ಇಂದು ಬೆಳಗ್ಗೆ ಸುಬ್ರಹ್ಮಣ್ಯ ದಿಂದ ಬೆಂಗಳೂರಿಗೆ ಹೊರಟ್ಟಿತ್ತು. ಸುಳ್ಯ ಮಡಿಕೇರಿ ಮಧ್ಯೆ ಇರುವ ಕೋಯನಾಡು ಬಳಿ ಟ್ಯಾಂಕರ್ ರಾಂಗ್ ಸೈಡ್‍ನಲ್ಲಿ ಎದುರಿಗೆ ಬರುತ್ತಿತ್ತು. ಇನ್ನೇನು ತಿರುವಿನಲ್ಲಿ ಎದುರಿಗೆ ಬರುತ್ತಿದ್ದ ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗುತ್ತಿತ್ತು. ಅಷ್ಟರಲ್ಲಿಯೇ ಚಾಲಕ ಸಮಯ ಪ್ರಜ್ಞೆಯಿಂದ ಬಸ್‍ನ್ನು ಎಡಬದಿಗೆ ತಿರುಗಿಸಿದಾಗ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ಘಟನೆಯಲ್ಲಿ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Comments

Leave a Reply

Your email address will not be published. Required fields are marked *