ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: ಓರ್ವ ಮಹಿಳೆ ಸಾವು, 25 ಜನರಿಗೆ ಗಾಯ

ರಾಯಚೂರು: ಸಾರಿಗೆ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಾತ್ ಮೈಲ್ ಬಳಿ ನಡೆದಿದೆ.

ಬಸ್‍ನಲ್ಲಿದ್ದ ಅಮೃತಾ (25) ಸಾವನ್ನಪ್ಪಿರುವ ದುರ್ದೈವಿ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ಕಾಲುಗಳು ಮುರಿದಿದ್ದು ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ನಲ್ಲಿ ಒಟ್ಟು 30 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. 25 ಜನರಿಗೆ ಗಾಯಗಳಾಗಿದ್ದು, ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಚಾಲಕ ಕಾರನ್ನು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ. ಈ ವೇಳೆ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ ರಸ್ತೆಯ ಪಕ್ಕದ ಹೊಲದಲ್ಲಿ ಪಲ್ಟಿಯಾಗಿದೆ.

ಸಾರಿಗೆ ಬಸ್ ರಾಯಚೂರಿನಿಂದ ಕಲಬುರಗಿ ಕಡೆಗೆ ಪ್ರಯಾಣ ಬೆಳೆಸಿತ್ತು. ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *