ಸರ್ಕಾರಿ ರಾಜಹಂಸ ಬಸ್ ಪಲ್ಟಿ – 15ಕ್ಕೂ ಅಧಿಕ ಮಂದಿಗೆ ಗಾಯ

ಗದಗ: ಸರ್ಕಾರಿ ರಾಜಹಂಸ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, 5 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಿಡಗುಂದಿ ಬಳಿ ನಡೆದಿದೆ.

ರಾಜಹಂಸ ಬಸ್ ಯಾದಗಿರಿಯಿಂದ ಗದಗ ಮಾರ್ಗವಾಗಿ ಧಾರವಾಡಕ್ಕೆ ತೆರಳುತ್ತಿತ್ತು. ಆದರೆ ಗಜೇಂದ್ರಗಡ ತಾಲೂಕಿನ ನಿಡಗುಂದಿ ಬಳಿ ಬರುತ್ತಿದ್ದಂತೆ ಬಸ್ ರಸ್ತೆ ಬದಿ ಪಲ್ಟಿಯಾಗಿದೆ. ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳು ನರಳಾಡುತ್ತಿರುವುದನ್ನ ಕಂಡ ಸ್ಥಳೀಯರು ತಕ್ಷಣ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚಾಲಕನ ಅಜಾಗರೂಕತೆಯಿಂದ ಬಸ್ ರಸ್ತೆ ಬದಿ ಉರುಳಿದೆ ಎನ್ನಲಾಗುತ್ತಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *