ಮಂಡ್ಯ ಬಸ್ ದುರಂತ ಮಾಸುವ ಮುನ್ನವೇ ಮತ್ತೊಂದು ಬಸ್ ಪಲ್ಟಿ – ಅದೃಷ್ಟವಶಾತ್ ತಪ್ಪಿದ ಅನಾಹುತ

ಚಿತ್ರದುರ್ಗ: ರಸ್ತೆಯಲ್ಲಿ ಅಡ್ಡ ಬಂದ ಕುರಿಗಳ ಪ್ರಾಣ ಉಳಿಸಲು ಯತ್ನಿಸಿದ ಖಾಸಗಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಹೊಸಕಲ್ಲಹಳ್ಳಿ ಬಳಿ ನಡೆದಿದೆ.

ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಕುರಿಗಳು ಆಕಸ್ಮಿಕವಾಗಿ ಅಡ್ಡ ಬಂದ ಕಾರಣ ಗಾಬರಿಯಾದ ಚಾಲಕ ಬಸ್ಸನ್ನು ತಕ್ಷಣ ರಸ್ತೆಯ ಕೆಳಗೆ ಇಳಿಸಿದ್ದಾನೆ. ಆದರೆ ಈ ವೇಳೆ ಬಸ್ಸಿನ ವೇಗದ ಹೆಚ್ಚಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಬಸ್ ಎಡ ಭಾಗಕ್ಕೆ ಪಲ್ಟಿಯಾಗಿದೆ.

ವೇಗವಾಗಿ ಬಂದ ಬಸ್ ಏಕಾಏಕಿ ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ 34 ಪ್ರಯಾಣಿಕರಲ್ಲಿ ಮೂವರು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಘಟನೆಯಲ್ಲಿ ಗಾಯಗೊಂಡವರನ್ನು ಚಳ್ಳಕೆರೆ ಹಾಗು ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಮಂಡ್ಯ ಬಸ್ ದುರಂತದ ಸಮಯದಲ್ಲಿ ನಡೆದಂತೆಯೇ ಬಸ್ಸಿನ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *