ಖಾಸಗಿ ಬಸ್ ಮಾಲೀಕ ನಾಪತ್ತೆ- ಸೇತುವೆ ಬಳಿ ಕಾರು, ಫೋನ್ ಪತ್ತೆ

ಶಿವಮೊಗ್ಗ: ಖಾಸಗಿ ಬಸ್ ಮಾಲೀಕ ನಾಪತ್ತೆಯಾಗಿದ್ದು, ಆತನ ಕಾರು ಮತ್ತು ಫೋನ್ ಪಟಗುಪ್ಪ ಸೇತುವೆಯ ಬಳಿ ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಖಾಸಗಿ ಬಸ್ ಮಾಲೀಕ ಪ್ರಕಾಶ್(46) ಶುಕ್ರವಾರ ರಾತ್ರಿ 8 ಗಂಟೆಯ ನಂತರ ಕಣ್ಮರೆಯಾಗಿದ್ದಾರೆ. ಆದರೆ ಅವರ ಕಾರು ಹಾಗೂ ಫೋನ್ ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆಯ ಬಳಿ ಪತ್ತೆಯಾಗಿದೆ. ಇದನ್ನೂ ಓದಿ: ಸಲ್ಮಾನ್ ಫಾರ್ಮ್‍ಹೌಸ್‍ನಲ್ಲಿ ಸೆಲೆಬ್ರಿಟಿಗಳ ಶವ, ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತೆ ಎಂದ ನೆರೆಮನೆಯವ!

ಪರಿಣಾಮ ಕಾರು ಹಾಗೂ ಫೋನ್ ಪತ್ತೆಯಾದ ಪಟಗುಪ್ಪ ಸೇತುವೆಯ ಶರಾವತಿ ಹಿನ್ನೀರಿನಲ್ಲಿ ಶನಿವಾರ ಮುಂಜಾನೆಯಿಂದ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಶೋಧಕಾರ್ಯ ನಡೆಸಿದ್ದಾರೆ. ಶನಿವಾರ ರಾತ್ರಿಯಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು. ಆದರೆ ಇದುವರೆಗೆ ನಾಪತ್ತೆಯಾಗಿರುವ ಪ್ರಕಾಶ್ ಅವರ ಯಾವುದೇ ಸುಳಿವು ಸಿಕ್ಕಿಲ್ಲ.

ಭಾನುವಾರ ಮುಂಜಾನೆಯಿಂದ ಮತ್ತೆ ಶೋಧಕಾರ್ಯ ಮುಂದುವರಿದಿದೆ. ಪ್ರಕಾಶ್ ಅವರು ನಾಪತ್ತೆಯಾಗಿರುವ ದಿನದಿಂದ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಆತಂಕಕ್ಕೆ ಒಳಗಾಗಿದ್ದಾರೆ. ಇಲ್ಲಿಯವರೆಗೂ ಅವರ ಸುಳಿವು ಸಿಕ್ಕಿಲ್ಲ. ಆದರೆ ಅವರ ಫೋನ್ ಮತ್ತು ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ತನಿಖೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಸತ್ಯೇಂದ್ರ ಜೈನ್‍ರನ್ನು ಬಂಧಿಸಲು ಇಡಿ ಯೋಜನೆ ರೂಪಿಸುತ್ತಿದೆ: ಕೇಜ್ರಿವಾಲ್

Comments

Leave a Reply

Your email address will not be published. Required fields are marked *