ಬಸ್‍ನ ಟಯರ್ ಸ್ಫೋಟ – 20 ಮಂದಿ ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ತಮಿಳುನಾಡಿನ ಮೆಟ್ಟೂರಿನಿಂದ ಮೈಸೂರಿಗೆ ಬರುತ್ತಿದ್ದ ತಮಿಳುನಾಡಿನ ಸಾರಿಗೆ ಸಂಸ್ಥೆ ಬಸ್‍ನ ಟಯರ್ ಸ್ಫೋಟಗೊಂಡು 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಅಜ್ಜೀಪುರ ಸಮೀಪ ನಡೆದಿದೆ.

ಬಸ್ ಸಂಚರಿಸುತ್ತಿರುವಾಗಲೇ ಟಯರ್ ಸ್ಫೋಟಗೊಂಡು ರಸ್ತೆ ಪಕ್ಕದ ಕಮರಿಗೆ ಹೋಗಿ ನಿಂತಿದೆ. ಅದೃಷ್ಟವಶಾತ್ ಬಸ್‍ನ ಅಕ್ಕಪಕ್ಕ ಯಾವುದೇ ವಾಹನಗಳು ಇರಲಿಲ್ಲ. ಜೊತೆಗೆ ಬಸ್ ನಿಧಾನಗತಿಯಲ್ಲಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಬಸ್‍ನಲ್ಲಿ ಎಲ್ಲಾ ಆಸನಗಳು ಭರ್ತಿಯಾಗಿತ್ತು ಎಂಬ ಮಾಹಿತಿ ತಿಳಿದುಬಂದಿದ್ದು, 20 ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಮಂಡ್ಯ SP ಹುದ್ದೆ ಹರಾಜಿಗಿದೆ – ಸಾಮಾಜಿಕ ಜಾಲತಾಣದಲ್ಲಿ ಲೇವಡಿ

ತಮಿಳುನಾಡಿನ ಸಾರಿಗೆ ಡಿಪೋ ರೀ ಬಿಲ್ಟ್ ಟಯರ್ ಬಳಸಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು ಸದ್ಯ ರಾಮಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳನ್ನು ಹನೂರು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿ – ಸವಾರನನ್ನು ಒದ್ದು ಕೊಂದ ಕಿರಾತಕ

Comments

Leave a Reply

Your email address will not be published. Required fields are marked *