ಪತ್ನಿ, ಮಗು ಸಮೇತ ನಡುರೋಡಲ್ಲೇ ಕಾರು ಮಾಲೀಕ ಪ್ರತಿಭಟನೆ!

– ಕೈ ಮುಗಿದು ಕ್ಷಮೆ ಕೇಳಿದ ಪೊಲೀಸರು

ಧಾರವಾಡ: ನಡು ರಸ್ತೆಯಲ್ಲಿಯೇ ತನ್ನ ಪತ್ನಿ, ಪುಟ್ಟ ಮಗು ಸಮೇತ ಕಾರು ಮಾಲೀಕ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಧಾರವಾಡ ಹೊರವಲಯದ ಕೆಲಗೇರಿ ಬ್ರಿಡ್ಜ್ ಬಳಿ ನಡೆದಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ವಾಹನ ದಾಖಲಾತಿ ತಪಾಸಣೆ ಹೆಸರಿನಲ್ಲಿ ಪೊಲೀಸರು ಕಿರಿಕಿರಿ ಉಂಟು ಮಾಡಿದ್ದಾರೆ ಎಂದು ಚಾಲಕ ಆರೋಪಿಸಿದ್ದಾರೆ. ಅಲ್ಲದೆ ತನ್ನ ಪುಟ್ಟ ಮಗು, ಪತ್ನಿ ಸಮೇತ ನಡುರಸ್ತೆಯಲ್ಲೇ ಪ್ರತಿಭಟಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ದಾಖಲಾತಿಗಳೆಲ್ಲ ಪರಿಶೀಲಿಸಿದ ಬಳಿಕವೂ ಪೊಲೀಸರು ಕಿರಿಕಿರಿ ಮಾಡಿದ್ದಾರೆ. ಇದರಿಂದ ನೊಂದ ಕಾರು ಮಾಲೀಕ ಪ್ರತಿಭಟನೆ ಮಾಡಿದ್ದಾರೆ. ಕೊನೆಗೆ ಪೊಲೀಸರು ಕೈ ಮುಗಿದು ಕ್ಷಮೆ ಕೇಳಿದ್ದಾರೆ.

ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರು ಹಣ ಕೇಳಿದ್ದರಿಂದ ಹೀಗಾಗಿದೆ ಎಂದು ವಾಟ್ಸಾಪ್, ಫೇಸ್‍ಬುಕ್‍ನಲ್ಲಿ ಪೋಸ್ಟ್ ರವಾನೆ ಆಗುತ್ತಿದ್ದು, ನೆಟ್ಟಿಗರು ಧಾರವಾಡ ಪೊಲೀಸರಿಗೆ ಛೀಮಾರಿ ಹಾಕುತ್ತಿದ್ದಾರೆ.

Comments

Leave a Reply

Your email address will not be published. Required fields are marked *