ವಿದೇಶ ಪ್ರವಾಸಕ್ಕೂ ಮುನ್ನ ಸಂಪುಟ ವಿಸ್ತರಣೆ- ಅರ್ಹ ಶಾಸಕರಿಗೆ ಸಿಎಂ ಭರವಸೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ಸನ್ನಿವೇಶ, ಸಂದರ್ಭಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ದೆಹಲಿ ವಿಧಾನಸಭೆ ಚುನಾವಣೆ ಬಳಿಕವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆಯಾ ಎಂಬ ಸುದ್ದಿಗಳು ಹರಿದಾಡುತ್ತಿರುವ ಮಧ್ಯೆಯೇ ಅರ್ಹ ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ವಿದೇಶ ಪ್ರವಾಸಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತಾಡಿದ ಮುಖ್ಯಮಂತ್ರಿಗಳು, ನಾಳೆ ಅಮಿತ್ ಶಾ ಭೇಟಿಗೆ ಸಮಯ ಕೇಳಿದ್ದೇನೆ. ಅಮಿತ್ ಶಾ ಒಪ್ಪಿದರೆ ನಾಳೆಯ ಕಾರ್ಯಕ್ರಮ ರದ್ದು ಮಾಡಿ ದೆಹಲಿಗೆ ಹೋಗಿ ಬರುತ್ತೇನೆ. ಅಮಿತ್ ಶಾ ಅವರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆಗೆ ದಿನಾಂಕ ಪಡೆದು ಬರುತ್ತೇನೆ ಅಂದರು.

ಸ್ವಿಟ್ಜರ್ಲೆಂಡ್‍ನ ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಗೆ ಪ್ರಧಾನಿಯವರ ಜೊತೆ ನಾನೂ ತೆರಳಲು ನಿರ್ಧರಿಸಿದ್ದೇನೆ. ಆದರೆ ದಾವೋಸ್ ಗೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ವಿದೇಶ ಪ್ರವಾಸ, ದೆಹಲಿ ಚುನಾವಣೆಗಳಿಗೂ ಸಂಪುಟ ವಿಸ್ತರಣೆಗೂ ಸಂಬಂಧ ಇಲ್ಲ. ಈ ತಿಂಗಳಲ್ಲೇ ಸಂಪುಟ ವಿಸ್ತರಣೆ ಮಾಡುತ್ತೇವೆ. ಮಾತು ಕೊಟ್ಟಂತೆ ಎಲ್ಲ ಶಾಸಕರಿಗೂ ಸಚಿವರಾಗಿ ಮಾಡ್ತೇವೆ. ಶಾಸಕರು ಆತಂಕಗೊಳ್ಳುವ ಅಗತ್ಯ ಇಲ್ಲ ಎಂದು ಇದೇ ವೇಳೆ ಅರ್ಹರಿಗೆ ಸಿಎಂ ಯಡಿಯೂರಪ್ಪ ಭರವಸೆ ಕೊಟ್ಟರು.

Comments

Leave a Reply

Your email address will not be published. Required fields are marked *