1,545 ಕೋಟಿ ನೆರೆ ಪರಿಹಾರ ಕೇಳಲು ಕೇಂದ್ರಕ್ಕೆ ಮನವಿ: ಕ್ಯಾಬಿನೆಟ್ ಸಭೆ ನಿರ್ಧಾರ

ಬೆಂಗಳೂರು: ಮುಂಗಾರು ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲು ಕ್ಯಾಬಿನೆಟ್ (Cabinet) ತೀರ್ಮಾನಿಸಿದೆ.

ಮೂಲಭೂತ ಸೌಕರ್ಯಗಳ ಹಾನಿಗೆ ಎನ್‌ಡಿಆರ್‌ಎಫ್ ಅಡಿ 1,545 ಕೋಟಿ ರೂ. ಆರ್ಥಿಕ ಸಹಾಯ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸರ್ಕಾರ ವರದಿ ಸಿದ್ಧಪಡಿಸಿದೆ. ಆದರೆ ಬೆಳೆ ನಷ್ಟದ ಬಗ್ಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿ ಪರಿಹಾರ ಕೇಳುತ್ತಿದ್ದೇವೆ ಅಂತಾ ಕಾನೂನು ಸಚಿವ ಹೆಚ್.ಕೆ.ಪಾಟೀಲ್ (H K Patil) ಸ್ಪಷ್ಟಪಡಿಸಿದ್ದಾರೆ.

ಇನ್ನು ಒಳ ಮೀಸಲಾತಿ ವಿಚಾರವಾಗಿ ಶೀಘ್ರದಲ್ಲೇ ಮಸೂದೆಗೆ ಕ್ರಮ ವಹಿಸುತ್ತೇವೆ. ಮುಂದಿನ ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.