ಕೆನಡಾದ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಸಾವು

ಒಟ್ಟಾವಾ: ಆಟೋವೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಕೆನಡಾದ ಒಂಟಾರಿಯೊ ಹೆದ್ದಾರಿಯಲ್ಲಿ ನಡೆದಿದೆ.

ಹರ್‍ಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರಣ್‍ಪಾಲ್ ಸಿಂಗ್, ಮೋಹಿತ್ ಚೌಹಾನ್ ಮತ್ತು ಪವನ್ ಕುಮಾರ್ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿಗಳು. ಈ ಬಗ್ಗೆ ಕೆನಡಾದಲ್ಲಿನ ಭಾರತೀಯ ಹೈಕಮಿಷನರ್ ಅಜಯ್ ಬಿಸಾರಿಯಾ ಟ್ವೀಟ್ ಮಾಡಿ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪವನ್ನು ಸೂಚಿಸಿದ್ದಾರೆ. ಟೊರೆಂಟೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸಂತ್ರಸ್ತರ ಸ್ನೇಹಿತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ ಎಂದು ತಿಳಿಸಿದರು.

ಟ್ವೀಟ್‍ನಲ್ಲಿ ಏನಿದೆ?
ಕೆನಡಾದ ಟೊರೊಂಟೊ ಬಳಿ ನಡೆದ ಆಟೋ ಅಪಘಾತದಲ್ಲಿ 5 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿದ್ದರು. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಸಹಾಯಕ್ಕಾಗಿ ಸಂತ್ರಸ್ತರ ಸ್ನೇಹಿತರೊಂದಿಗೆ ಭಾರತೀಯ ರಾಯಭಾರಿ ತಂಡವು ಸಂಪರ್ಕದಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಅಪಘಾತದ ಕುರಿತು ತನಿಖೆ ನಡೆಯುತ್ತಿದೆ ಎಂದು ಕ್ವಿಂಟೆ ವೆಸ್ಟ್ ಒಂಟಾರಿಯೊ ಪ್ರಾಂತೀಯ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಲೂಗಡ್ಡೆ, ಟೊಮೆಟೊ ಬೆಲೆ ಪರಿಶೀಲಿಸಲು ನಾನು ರಾಜಕೀಯ ಸೇರಿಲ್ಲ – ಪಾಕ್ ಪ್ರಧಾನಿ

Comments

Leave a Reply

Your email address will not be published. Required fields are marked *