ಮೈಸೂರು: ಕನಸಿನ ಯೋಜನೆಯಾಗಿದ್ದ ಇಂದಿರಾ ಕ್ಯಾಂಟೀನ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದೇ ತವರು ಜಿಲ್ಲೆಯಲ್ಲಿ ಯಾವ ಸ್ಥಿತಿಯಲ್ಲಿದೆ ಅಂತಾ ನೋಡಿದರೆ ನಿಮಗೆ ಅಯ್ಯೋ ಎನ್ನಿಸೋದು ಖಚಿತ. ಮೈಸೂರಿನ ಕನಕಗಿರಿಯಲ್ಲಿ ಇಂದಿರಾ ಕ್ಯಾಂಟೀನ್ ಇದೆ. ಈ ಕ್ಯಾಂಟೀನ್ ನಲ್ಲಿ ಪ್ರತಿ ದಿನ ರಾತ್ರಿ ಕ್ಯಾಂಡಲ್ ಲೈಟ್ ಡಿನ್ನರ್ ನಡೆಯುತ್ತದೆ.
ಇಂದಿರಾ ಕ್ಯಾಂಟೀನ್ ನಲ್ಲಿ ವಿದ್ಯುತ್ ಇಲ್ಲ. ಇಂದಿರಾ ಕ್ಯಾಂಟೀನ್ ಗೆ ಇದ್ದ ವಿದ್ಯುತ್ ಸರಬರಾಜು ಕಟ್ ಆಗಿ 15 ದಿನವಾಗಿದೆ. ಆದರೂ ಸಂಬಂಧಪಟ್ಟವರು ಇದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿಲ್ಲ. ಪರಿಣಾಮ ಜನರು ರಾತ್ರಿ ವೇಳೆ ಕ್ಯಾಂಡಲ್ ಇಟ್ಟುಕೊಂಡು ಊಟ ಮಾಡುತ್ತಿದ್ದಾರೆ.

ಊಟ ಕೊಡುವವರು ಸಹಿತ ಕ್ಯಾಂಡಲ್ ಹಚ್ಚಿಕೊಂಡು ಊಟ ಕೊಡುತ್ತಿದ್ದಾರೆ. ಇಂದಿರಾ ಕ್ಯಾಂಟೀನಿನ ಉಸ್ತುವಾರಿಯನ್ನು ಮೈಸೂರು ಮಹಾನಗರ ಪಾಲಿಕೆ ಹೊತ್ತಿದೆ. ಮೈಸೂರು ಪಾಲಿಕೆಯಲ್ಲೂ ಕಾಂಗ್ರೆಸ್ ಆಡಳಿತದಲ್ಲಿದೆ. ಆದರೂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ ವಿಚಾರದಲ್ಲಿ ಈ ರೀತಿಯ ಅಸಡ್ಡೆ ಮುಂದುವರಿದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply