ಸೇತುವೆ ಕೆಳಗೆ ಬಿದ್ದ ಕಾರು- 13 ಮಂದಿ ಪ್ರಾಣಾಪಾಯದಿಂದ ಪಾರು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಯ ಕೆಳಗೆ ಬಿದ್ದ ಆಘಾತಕಾರಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಬಳಿ ಘಟನೆ ನಡೆದಿದ್ದು, ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ತಾಯಲೂರು ಗ್ರಾಮದ 13 ಮಂದಿ ಟವೇರಾ ಕಾರಲ್ಲಿ ವಿದುರಾಶ್ವತ್ಥ ಗ್ರಾಮದ ಅಶ್ವತ್ಥನಾರಾಯಣನ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಕಲ್ಲೂಡಿ ಬಳಿಯ ತಿರುವಿನಲ್ಲಿ ಸೇತುವೆ ಇರುವುದನ್ನು ಗಮನಿಸದ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿದ ಪರಿಣಾಮ ಕಾರು ಸೇತುವೆಯ ಸ್ಟೀಲ್ ತಡೆಗೋಡೆಯನ್ನು ಒಡೆದು ಕೆಳಗೆ ಉರುಳಿಬಿದ್ದಿದೆ.

ಕಾರು ಕೆಳಗೆ ಪಲ್ಟಿಯಾಗಿದ್ದು, ತೀವ್ರ ಗಾಯಗೊಂಡಿರುವ 8 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಉಳಿದವರನ್ನು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ 13 ಮಂದಿ ಸಹ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿರುವವರು ಚಿಕಿತ್ಸೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *