ಹೆದ್ದಾರಿಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು!

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೆದ್ದಾರಿಯಲ್ಲೆ ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರು ಹೊರವಲಯ ರಾಷ್ಟ್ರೀಯ ಹೆದ್ದಾರಿ 72 ರ ನೆಲಮಂಗಲದ ಕುಣಿಗಲ್ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಕುಟುಂಬ, ಸಕಲೇಶಪುರ ಕಡೆಯಿಂದ ಪ್ರವಾಸ ಮುಗಿಸಿ ಬೆಂಗಳೂರು ಕಡೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ  ಕಾರು ಶಿವಮೊಗ್ಗ ಮೂಲದ ಶ್ರೀಧರ್ ಎಂಬವರಿಗೆ  ಸೇರಿದ್ದಾಗಿದೆ.

ಕಾರಿನಲ್ಲಿದ್ದ ಚಂದನ್ ಪಟೇಲ್, ಮೋನಿಕಾ, ಇಬ್ಬರು ಮಕ್ಕಳಾದ ಮನೋಜ್ಞ ಹಾಗೂ ಚಿಂತನ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹೊತ್ತಿ ಉರಿಯುತ್ತಿದ್ದ ಕಾರಿನ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Comments

Leave a Reply

Your email address will not be published. Required fields are marked *