ಹೊತ್ತಿ ಉರಿಯಿತು 10 ಮಂದಿ ಪ್ರಯಾಣಿಕರಿದ್ದ ಕಾರು

ಬೆಂಗಳೂರು: 10 ಮಂದಿ ಪ್ರಯಾಣಿಕರು ಚಲಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿ ಹೊತ್ತಿಕೊಂಡು, ಸುಟ್ಟು ಭಸ್ಮವಾದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ಮೇಲ್ಸೇತುವೆ ಮೇಲೆ ನಡೆದಿದೆ.

ಬೆಂಗಳೂರಿನ ಜೆಪಿ ನಗರ ನಿವಾಸಿ ಸೈಯದ್ ಅವರಿಗೆ ಸೇರಿದ ಸ್ಕಾರ್ಪಿಯೋ ಕಾರು ಆಕಸ್ಮಿಕ ಬೆಂಕಿ ಅನಾಹುತಕ್ಕೆ ತುತ್ತಾಗಿದೆ. ಸೈಯದ್ ಅವರ ಕುಟುಂಬದ ಒಟ್ಟು 10 ಮಂದಿ ಕಾರಿನಲ್ಲಿ ತಮಿಳುನಾಡಿನ ಹೊಸೂರಿನತ್ತ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದು, ಕ್ಷಣಾರ್ಧದಲ್ಲಿ 10 ಜನರು ಕಾರಿನಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ.

ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವುದರೊಳಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎನ್ನುವ ಬಗ್ಗೆ ಮಾಹಿತಿ ದೊರಕಿಲ್ಲ. ಆದರೆ ಶಾರ್ಟ್  ಸರ್ಕ್ಯೂಟ್ ನಿಂದ ವಾಹನಕ್ಕೆ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.

ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *