ಗುಡಿಸಲಿಗೆ ಡಿಕ್ಕಿ ಹೊಡೆದ ಕಾರು- ನಾಲ್ವರು ಮಹಿಳೆಯರು ಸಾವು

ಹೈದರಾಬಾದ್: ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ನಾಲ್ವರು ಮಹಿಳೆಯರು ಮೃತಪಟ್ಟಿದ್ದು, ಮೂವರು ಮಹಿಳೆಯರು ಗಾಯಗೊಂಡಿರುವ ಘಟನೆ ತೆಲಂಗಾಣದ ಕರೀಂನಗರದಲ್ಲಿ ನಡೆದಿದೆ.

ಕರೀಂನಗರ ನಗರದ ಕಮಾನ್ ಪ್ರದೇಶದಲ್ಲಿ ರಸ್ತೆ ಬಳಿ ಇದ್ದ ಗುಡಿಸಲಿಗೆ ಕಾರು ಡಿಕ್ಕಿ ಹೊಡೆದಿದೆ. ಗುಡಿಸಲೊಳಗೆ ಒಟ್ಟು ಆರು ಮಹಿಳೆಯರು ಕೆಲಸ ಮಾಡುತ್ತಿದ್ದರು. ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೂವರು ಮಹಿಳೆಯರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ತಾಯಿಗೆ ಇಟ್ಟಿಗೆಯಿಂದ ಹೊಡೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ

POLICE JEEP

ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ರಾಜೇಂದ್ರ ಪ್ರಸಾದ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಈ ವಾಹನ ನೋಂದಣಿಯಾಗಿರುವುದು ತಿಳಿದು ಬಂದಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಶೇ.75 ವಯಸ್ಕರಿಗೆ ಎರಡೂ ಡೋಸ್‌ ಲಸಿಕೆ – ಪ್ರಧಾನಿ ಅಭಿನಂದನೆ

Comments

Leave a Reply

Your email address will not be published. Required fields are marked *